Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಹುಟ್ಟು ಹಬ್ಬದ ನಿಮಿತ್ತವಾಗಿ ಹಣ್ಣು ವಿತರಣೆ

Advertisement

ಚಿಕ್ಕೋಡಿ : ಸದಾಕಾಲ ಕನ್ನಡ ನೆಲ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಕ್ಕಾಗಿ, ದಶಕಗಳಿಂದ ಹೋರಾಟ ನಡೆಸುತ್ತ ಬಂದಿರುವ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡರ, 60 ನೇ ಹುಟ್ಟು ಹಬ್ಬದ ನಿಮಿತ್ತವಾಗಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಆಸ್ಪತ್ರೆಯಲ್ಲಿ, ಚಿಕ್ಕೋಡಿ ತಾಲ್ಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಅವರ ನೇತೃತ್ವದಲ್ಲಿ, ಹಣ್ಣು ವಿತರಿಸಲಾಯಿತು.

ಈ ಸಂಧರ್ಭದಲ್ಲಿ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ನಾರಾಯಣ ಗೌಡರು ನೆಲ, ಜಲ, ಗಡಿ ವಿಷಯದಲ್ಲಿ ಕನ್ನಡಿಗರಿಗೆ ಅನ್ಯಾಯ ಆದರೆ ತಕ್ಷಣ ಹೋರಾಟ ಮಾಡಿ, ಕನ್ನಡಿಗರಿಗೆ ಅನ್ಯಾಯ ಆಗದಂತೆ ನೋಡುತ್ತ ಬಂದಿದ್ದಾರೆ, ಇವರ ಹೋರಾಟವು ಕನ್ನಡ ಮನಸ್ಸುಗಳಿಗೆ ಕೊಡುಗೆಯಾಗಿದೆ, ಇವರಿಗೆ ದೇವರು ಆಯುರಾರೋಗ್ಯ ನೀಡಿ, ದೀರ್ಘಾಯುಷ್ಯ ನೀಡಲಿ ಎಂದು ಹೇಳಿದರು.

news_1781157206_0_277.webp

 

ಕರವೇ ಚಿಕ್ಕೋಡಿ ತಾಲೂಕಾ ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ನಾರಾಯಣ ಗೌಡರು ಕನ್ನಡ ನಾಡಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟವರು, ಇವರ ಹುಟ್ಟು ಹಬ್ಬದ ನಿಮಿತ್ಯ ನಾವು ಪ್ರತಿ ವರ್ಷ ರಕ್ತದಾನ, ಶಾಲಾ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಿಸುವುದು ಹೀಗೆ ಹತ್ತು ಹಲವಾರು ಕಾರ್ಯಗಳನ್ನು ಮಾಡುತ್ತ ಬಂದಿದ್ದೇವೆ, ಈ ವರ್ಷ ಆಸ್ಪತ್ರೆಯಲ್ಲಿ ಹಣ್ಣು ವಿತರಿಸುವ ಮೂಲಕ, ಗೌಡರ ಆಯಸ್ಸು, ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದೇವೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಅಮೂಲ ನಾವಿ, ಅನೀಲ ನಾವಿ, ರಫೀಕ್ ಪಠಾಣ, ರುದ್ರಯ್ಯಾ ಹಿರೇಮಠ, ಡಾ. ವರ್ಧಮಾನ ಬದನಿಕಾಯಿ, ಡಾ. ವಿಶಾಲ ಹಡಪದ, ರಮೇಶ ಡಂಗೇರ, ಸಚೀನ ದೊಡ್ಡಮನಿ, ಶುಭಂ ಕದಮ, ಸುರೇಶ ಮಾನೆ, ರಾಜೇಂದ್ರ ಕಾಂಬಳೆ, ಸತ್ಯಪ್ಪಾ ಕಾಂಬಳೆ, ಸೋಮೇಶ ಮಿರ್ಜೆ, ಮಲ್ಲಪ್ಪಾ ಡೋನವಾಡೆ, ಸುನೀಲ ತೇರದಾಳೆ, ಭೀಮಾ ಶಿರಗಾವೆ, ಖಾನಪ್ಪಾ ಬಾಡಕರ, ಶಿವಾಜಿ ಖಾಡೆ, ಸಂಜಯ ಬೇವಿನಗಿಡದ, ಮಲ್ಲಿಕಾರ್ಜುನ ಕರೋಶಿ, ಯಾಶೀನ ಜಮಾದಾರ ಸೇರಿದಂತೆ ನೂರಾರು ಕನ್ನಡ ಸೇನಾನಿಗಳು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು