LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಜಿ. ಪರಮೇಶ್ವರ್

Advertisement

ಬೆಂಗಳೂರು : ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಇಂದು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.


ಒಳಮೀಸಲಾತಿ ಹಂಚಿಕೆಯಲ್ಲಿ ಗೊಂದಲ ಆಗಿದೆ ಅಂತ ಸಮಸ್ಯೆ ಆಗಿದೆ. ರೋಸ್ಟರ್ ಮಾಡುವಾಗ ಒಂದು ವರ್ಗಕ್ಕೆ ಹೆಚ್ಚು ಮೀಸಲಾತಿ ಸಿಗುತ್ತದೆ ಅನ್ನೋದಿದೆ.

ಈಗ ಮತ್ತೆ ಸಂಪುಟದಲ್ಲಿ ವಿಷಯದ ಮೇಲೆ ಚರ್ಚೆ ಆಗುತ್ತದೆ. ಅಂತಿಮವಾಗಿ ಸಂಪುಟದಲ್ಲಿ ಏನು ಚರ್ಚೆ ಆಗುತ್ತೋ ಅದರಂತೆ ಮುಂದುವರಿಯುತ್ತೇವೆ. ಎಸ್‌ಸಿ ಸಮುದಾಯಕ್ಕೆ 17% ಒಳಮೀಸಲಾತಿ ಕೊಡುವ ತೀರ್ಮಾನ ಆಗಿತ್ತು.

ಆದರೆ ಅಲೆಮಾರಿಗಳಿಗೆ ಪ್ರತ್ಯೇಕ 1% ಕೊಡಿ ಅಂತ ಬೇಡಿಕೆ ಇದೆ. ಕೋರ್ಟಿನಲ್ಲೂ 56% ಮೀಸಲಾತಿಗೆ ತಡೆ ಕೊಡಲಾಗಿದೆ. ಇದೆಲ್ಲ ದೊಡ್ಡ ಚರ್ಚೆ ನಡೆಸಿ ತೀರ್ಮಾನ ಮಾಡಬೇಕಾದ ವಿಚಾರ. ಭಿನ್ನಾಭಿಪ್ರಾಯಗಳು ಇದ್ದೇ ಇರ್ತವೆ. ಏನೇ ಇದ್ದರೂ ಸಂಪುಟದಲ್ಲಿ ಚರ್ಚೆ ಮಾಡಿ ಎಲ್ಲರ ಹಿತಾಸಕ್ತಿ ನೋಡಿ ತೀರ್ಮಾನ ಆಗುತ್ತೆ ಅಂತ ಭರವಸೆ ವ್ಯಕ್ತಪಡಿಸಿದರು.

ಇನ್ನು 56% ಮೀಸಲಾತಿಯಡಿಯೇ ನೇಮಕಾತಿ ಹಾಗೂ ಒಳಮೀಸಲಾತಿ ಕೊಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಹೋರಾಟದ ಎಚ್ಚರಿಕೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ.

ಬಿಜೆಪಿಯವರಿಗೂ ಗೊತ್ತಿದೆ, 56% ಮೀಸಲಾತಿ ಕೊಡಕ್ಕಾಗಲ್ಲ ಅಂತ. ಆದ್ರೆ ಬಿಜೆಪಿ ರಾಜಕೀಯ ಕಾರಣಕ್ಕೆ ಎಲ್ಲರಿಗೂ ಪ್ರಚೋದನೆ ಮಾಡುತ್ತಿದ್ದಾರೆ. ಅವರ ರಾಜಕೀಯ ಮೇಲ್ನೋಟಕ್ಕೇ ಗೊತ್ತಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST