LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ : ಜಿ. ಪರಮೇಶ್ವರ್ 

Advertisement
ಮೈಸೂರು : ಪಂಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕ ಉಪ ಚುನಾವಣೆ ಗದ್ದಲದಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿತ್ತು.

ಆದರೆ, ಇದೀಗ ಗೃಹ ಸಚಿವ ಜಿ ಪರಮೇಶ್ವರ್ ನಾಯಕತ್ವ ಬದಲಾವಣೆ ವಿಚಾರವಾಗಿ ಸ್ಫೋಟಕವಾದ ಹೇಳಿಕೆ ನೀಡಿದ್ದು, ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ.ಇದಕ್ಕೆ ಹೈ ಕಮಾಂಡ್ ಸ್ಪಷ್ಟನೆ ಬೇಕಿಲ್ಲ ಎಂದು ತಿಳಿಸಿದ್ದಾರೆ.

ಮೈಸೂರಲ್ಲಿ ಮಾತನಾಡಿದ ಅವರು, ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು.

ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದರು.

2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ? ಹೈ ಕಮಾಂಡ್ ಯಾವ ಗೊಂದಲಗಳನ್ನ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರು ಅದು ಮುಖ್ಯ ಅಲ್ಲ ಎಂದರು.

ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ