LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ : ಇಬ್ಬರು ಕಿಡಿಗೇಡಿಗಳು ಅರೆಸ್ಟ್

Advertisement
ರಾಯಚೂರು: ಗಣೇಶ ಮೆರವಣಿಗೆ ಸಂದರ್ಭದಲ್ಲಿ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ಗಣೇಶ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.

ಈ ಘಟನೆಯ ಸಂಬಂಧ ಪ್ರಶಾಂತ್ ಮತ್ತು ಪ್ರವೀಣ್ ಎಂಬ ಯುವಕರನ್ನು ಬಂಧಿಸಲಾಗಿದೆ.ಗಣೇಶ ಮೆರವಣಿಗೆ ಸಾಗುವ ವೇಳೆ ರಸ್ತೆ ಪಕ್ಕದ ಮಳಿಗೆಯೊಂದರ ಟೆರೆಸ್ ಮೇಲೆ ನಿಂತು ಈ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಈ ಘಟನೆಗೆ ಹಳೆಯ ವೈಷಮ್ಯ ಕಾರಣ ಎನ್ನಲಾಗಿದೆ. ಗಂಗಾನಿವಾಸ ಮಾರ್ಗ ಮೂಲಕ ಮೆರವಣಿಗೆ ಬಂದಿದ್ದಕ್ಕೆ ಈ ಯುವಕರು ವಿನಯ್ ಕುಮಾರ್ & ಗಣೇಶ್ ಎಂಬುವವರನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಈ ಕಲ್ಲು ತೂರಾಟದ ಘಟನೆಯಲ್ಲಿ ವಿನಯ್ ಕುಮಾರ್ ಮತ್ತು ಗಣೇಶ್ ಎಂಬ ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಳಿಗೆ ಮೇಲೆ ಕುಳಿತು ಹೀಗೆ ಕಲ್ಲು ತೂರಿದ ಯುವಕರನ್ನ ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಸಂಬಂಧ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ