LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಡಿಸೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ : ಗೋವಿಂದ ಕಾರಜೋಳ

Advertisement

ಚಿತ್ರದುರ್ಗ : ಡಿಸೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ್ ಹೇಳಿಕೆ ನೀಡಿದರು. ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ.


ಮುಖ್ಯಮಂತ್ರಿ ಸ್ಥಾನಕ್ಕಾಗಿ ರಣಹದ್ದಿನಂತೆ ಕಚ್ಚಾಡುತ್ತಿದ್ದಾರೆ.ದಲಿತ ಸಿಎಂ ಗೆ ಪರಮೇಶ್ವರ್ ಮಲ್ಲಿಕಾರ್ಜುನ ಖರ್ಗೆ, ಎಚ್ ಸಿ ಮಹದೇವಪ್ಪ ಹಾಗೂ ಮುನಿಯಪ್ಪ ಪೈಪೋಟಿ ನಡೆಸಿದ್ದಾರೆ ಎಂದರು.

ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದು ಇನ್ನೊಂದು ಕಡೆ ವಿಪಕ್ಷ ಬಿಜೆಪಿ ನಾಯಕರು ಶೀಘ್ರದಲ್ಲಿ ಸರ್ಕಾರ ಪತನವಾಗಲಿದ್ದು ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ.

ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರ ಪತನಗೊಂಡು 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ 2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಅಂತ ನಾನು ಹೇಳುವುದಿಲ್ಲ. ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ.

ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಉಸ್ತುವಾರಿ ಸಚಿವರಿಗೆ ಜನರು ಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿಕೆ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ