ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಮೃತರಾದರವರನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು, 17 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇದುವರೆಗೆ ಸುಮಾರು 1,12,092 ಕ್ಕೂ ಹೆಚ್ಚು ಅನರ್ಹರನ್ನು ಪತ್ತೆ ಹಚ್ಚಿ ಪಟ್ಟಿಯಿಂದ ಕೈ ಬಿಡಲಾಗಿದೆ.
ಇವುಗಳಲ್ಲಿ 55,232 ಮೃತರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಜೊತೆಗೆ ಐಟಿ, ಜಿಎಸ್ಟಿ ಪಾವತಿಸುತ್ತಿರುವ 56,860 ಮಹಿಳೆಯರನ್ನು ಗೃಹಲಕ್ಷ್ಮಿ ಪಟ್ಟಿಯಿಂದ ಕೈ ಬಿಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಸಾವಿರ, ಉಡುಪಿ ಜಿಲ್ಲೆಯಲ್ಲಿ 2,800, ದಾವಣಗೆರೆಯಲ್ಲಿ 4000, ಮೈಸೂರು ಜಿಲ್ಲೆಯಲ್ಲಿ 18000, ಉತ್ತರ ಕನ್ನಡ ಜಿಲ್ಲೆಯಲ್ಲಿ 6380, ಹಾವೇರಿಯಲ್ಲಿ 6346, ಚಿತ್ರದುರ್ಗದಲ್ಲಿ 12,637, ಕೊಪ್ಪಳ ಜಿಲ್ಲೆಯಲ್ಲಿ 7,200 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 1,12,092 ಫಲಾನುಭವಿಗಳನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.

