Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಂದಾಯ ನೌಕರರ ಸಮಸ್ಯೆಗಳ ನಿವಾರಣೆಗೆ ಜಿಲ್ಲಾಧ್ಯಕ್ಷ ನರಸಿಂಹರಾಜು ಭರವಸೆ

Advertisement
ಪಾವಗಡ :ಪಟ್ಟಣದ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಬಳಿ ಸಾಯಂಕಾಲ ಕಂದಾಯ ಇಲಾಖೆ ನೌಕರರ ಸಂಘದ ಸಭೆ ಜಿಲ್ಲಾಧ್ಯಕ್ಷ ನರಸಿಂಹರಾಜು ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಘದ ಜಿಲ್ಲಾಧ್ಯಕ್ಷರಾದ ನರಸಿಂಹರಾಜು ಅವರು, ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

​ಜಿಲ್ಲಾ ಪದಾಧಿಕಾರಿಗಳ ತಂಡವು ಪಾವಗಡ ತಾಲ್ಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಸ್ಥಳೀಯ ಕಂದಾಯ ನೌಕರರು ಹಾಗೂ ಗ್ರಾಮ ಸಹಾಯಕರೊಂದಿಗೆ ಸಮಾಲೋಚನೆ ನಡೆಸಲಾಯಿತು.



ಈ ವೇಳೆ ನೌಕರರು ತಾವು ಎದುರಿಸುತ್ತಿರುವ ಪ್ರಮುಖ ಸವಾಲುಗಳ ಬಗ್ಗೆ ಜಿಲ್ಲಾಧ್ಯಕ್ಷರ ಮುಂದೆ ಸುದೀರ್ಘವಾಗಿ ಚರ್ಚಿಸಿದರು.

ಪಾವಗಡ ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ನೌಕರರು ಅನುಭವಿಸುತ್ತಿರುವ ಅತಿಯಾದ ಕೆಲಸದ ಒತ್ತಡ ಮತ್ತು ಇಲಾಖೆಯ ಆಂತರಿಕ ಸಮಸ್ಯೆಗಳ ಬಗ್ಗೆ ಪದಾಧಿಕಾರಿಗಳು ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು.

​ನೌಕರರ ನ್ಯಾಯಬದ್ಧ ಬೇಡಿಕೆಗಳನ್ನು ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಮತ್ತು ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಶೀಘ್ರವಾಗಿ ಪರಿಹರಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಲಾಯಿತು.

ನೌಕರರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಹಾಗೂ ಸಂಘಟನೆಯನ್ನು ಮತ್ತಷ್ಟು ಶಕ್ತಿಯುತಗೊಳಿಸುವ ಮೂಲಕ ತಮ್ಮ ಹಕ್ಕುಗಳನ್ನು ಪಡೆಯಬೇಕು ಎಂದು ಜಿಲ್ಲಾಧ್ಯಕ್ಷರು ಕರೆ ನೀಡಿದರು.

​ ಕಂದಾಯ ಇಲಾಖೆಯ ಮೂಲ ಹಂತದ ಕೆಲಸಗಾರರಾದ ಗ್ರಾಮ ಸಹಾಯಕರ ಸಂಘದ ಸದಸ್ಯರ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ವಿಶೇಷ ಗಮನಹರಿಸಲಾಯಿತು.

ಈ ​ ವೇಳೆಯಲ್ಲಿ ಈ ಸಭೆಗೆ ಭಾಗವಹಿಸಿದವರು. ಗ್ರಾಮ ಆಡಳಿತ ಅಧಿಕಾರಿ ಜಿಲ್ಲಾ ಅಧ್ಯಕ್ಷ ದೇವರಾಜು. ರಾಜ್ಯ ಪ್ರಧಾನ ಜಂಟಿ ಕಾರ್ಯದರ್ಶಿ ರಂಜಿತ್ ಕುಮಾರ್. ಕಂದಾಯ ಇಲಾಖೆಯ ನೌಕರ ಸಂಘಕ್ಕೆ ತಾಲೂಕ್ ಘಟಕ ಅಧ್ಯಕ್ಷ ಕಿರಣ್ ಕುಮಾರ್.ಕಂದಾಯ ಇಲಾಖೆ ನೌಕರರ ಸಂಘಕ್ಕೆ ನಿರ್ದೇಶಕರಗಳರಾದ. ಶಿರಸ್ತೆದಾರ್ ಚಂದ್ರಶೇಖರ್. ಆರ್ ಐ ರಾಜಗೋಪಾಲ್. ರಾಜೇಶ್. ಸಂಘದ ಪದಾಧಿಕಾರಿಗಳು, ಮತ್ತು ಗ್ರಾಮ ಸಹಾಯಕರ ಸಂಘದ ಸದಸ್ಯರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು .

ವರದಿ:ಶಿವಾನಂದ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್