Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ಸಂರಕ್ಷಣೆಗೆ ನಮ್ಮ ನಿಮ್ಮೆಲ್ಲರ ಹೊಣೆ ವಿದ್ಯಾರ್ಥಿಗಳಿಗೆ ಕರೆ |ಮಾಜಿ ಪಾಲಿಕೆ ಸದಸ್ಯ ಎಚ್ ಎನ್ ಗಂಗಾಧರ್

Advertisement
ಬೆಂಗಳೂರುಪೀಣ್ಯ ದಾಸರಹಳ್ಳಿ: -ಪರಿಸರದ ಮಹತ್ವವನ್ನು ಕುರಿತು ಅಧ್ಯಯನದಿಂದ ಮತ್ತು ಸಹಜ ಬಾಳ್ವೆಯಿಂದ ಪರಿಸರ ಸಂರಕ್ಷಣೆ ಮಾಡುತ್ತಾ ಜೀವ ಸಂತತಿಯನ್ನು ಉಳಿಸಿ,ಬೆಳೆಸಲು ಸಾದ್ಯವಾಗುತ್ತದೆ ಎಂದು ಹೆಗ್ಗನಹಳ್ಳಿ ನಿಸರ್ಗ ಶಿಕ್ಷಣ ಸಂಸ್ಥೆಯ ಫೌಂಡರ್ ಕಾರ್ಯದರ್ಶಿ ,ಮಾಜಿ ಪಾಲಿಕೆ ಸದಸ್ಯ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್ ಎನ್ ಗಂಗಾಧರ್ ತಿಳಿಸಿದರು.



ಅವರು ಹೆಗ್ಗನಹಳ್ಳಿ ನಿಸರ್ಗ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಜಾಥಾ ಮತ್ತು ಗಿಡ ನೆಟ್ಟು ನೀರು ನುಗ್ಗಿಸುವ ಕಾರ್ಯ ಕ್ರಮ ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ಶಿಕ್ಷಕಿಯರ ನೇತೃತ್ವದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು ಪರಿಸರದಲ್ಲಿರುವ ನೆಲ, ಜಲ, ಗಾಳಿ, ಆಹಾರ,ಪಕ್ಷಿ, ಪ್ರಾಣಿ ಪ್ರಬೇಧಗಳಿಗೆ ತನ್ನದೇ ಆದ ಮಹತ್ವವಿದೆ ಮತ್ತು ಪರಿಸರ ಸಂಬಂಧವಿದೆ ಪರಿಸರ ಶುದ್ದವಾಗಿದ್ದಾಗ, ಆಹಾರ,ನೀರು, ಗಾಳಿ, ಶುದ್ದವಾಗಿ ದೊರೆಯುತ್ತದೆ. ಇದು ಜೀವಿಗಳ ಆರೋಗ್ಯಕರ ಬದುಕಿಗೆ ನೆರವಾಗುತ್ತದೆ.



ಪರಿಸರ ಮಲಿನಗೊಂಡಾಗ ಮನುಷ್ಯ ಸೇವಿಸುವ ಗಾಳಿ ನೀರು ಆಹಾರ ಕಲುಷಿತಗೊಂಡು ಅನಾರೋಗ್ಯ ಏರ್ಪಡುತ್ತದೆ ನಾಗರೀಕತೆಗೆ ಜನ್ಮ ಕೊಟ್ಟ ನದಿ ಮೂಲ ಇಂದು ನಾಗರೀಕರಿಂದಲೇ ಮಲಿನಗೊಂಡು ಜೀವ ಪ್ರಬೇಧಗಳ ಅಳಿವಿಗೆ ಕಾರಣವಾಗುತ್ತಿವೆ ಮನುಷ್ಯ ತನ್ನ ಒಳಿತಿಗಾಗಿ ಪ್ರಕೃತಿಕ ಸಂಪನ್ಮೂಲಗಳನ್ನು ದೋಚುತ್ತಿದ್ದಾನೆ ಎಂದು ವಿದ್ಯಾರ್ಥಿಗಳಿಗೆ ಪರಿಸರ ಬಗ್ಗೆ ಜ್ಞಾನ ನೀಡಿ ಎಚ್ ಎನ್ ಗಂಗಾಧರ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನಿಸರ್ಗ ಶಾಲಾ ಮುಖ್ಯೋಪಾಧ್ಯಾಯನಿ ಬಿ.ಎಸ್ ಪುಷ್ಪಲತಾ, ಶಾರೀರಿಕ ಶಿಕ್ಷಕ ಚಂದ್ರಶೇಖರ್,ಭರತ್, ಮಾಜಿ ಪಾಲಿಕೆ ಸದಸ್ಯ ಎಚ್ ಎನ್ ಗಂಗಾಧರ್ ಅವರ ಸುಪುತ್ರ ಸ್ವರೂಪ ಗಂಗಾಧರ್, ಯೋಗೇಶ್, ಗೋಪಾಲ್, ವೆಂಕಟೇಶ್, ಶ್ರೀನಿವಾಸ್ ಸೇರಿದಂತೆ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು.

ವರದಿ:- ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು