LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

2028ಕ್ಕೆ ನಾನೇ ಸಿಎಂ ಆಗ್ತೀನಿ : ಶಾಸಕ ಯತ್ನಾಳ್

Advertisement

ವಿಜಯಪುರ : ಸಿಎಂ ಅವರು ಸದನದಲ್ಲಿ ನನಗೆ ಯತ್ನಾಳ್ ನೀವು ಉಚ್ಚಾಟಿತರಾಗಿದ್ದೀರಿ ಎಂದು ತಿಳಿಸಿದಾಗ, ನಿಮ್ಮನ್ನೂ ದೇವೇಗೌಡ ಉಚ್ಚಾಟಿಸಿದ್ದರು ಸಿಎಂ ಆದಿರಿ. ಯಡಿಯೂರಪ್ಪ ಅವರನ್ನೂ ಉಚ್ಛಾಟಿಸಿದ್ದರು ಸಿಎಂ ಆದರು. ಒಮ್ಮೆ ಕುಮಾರಸ್ವಾಮಿಯನ್ನು ಉಚ್ಛಾಟಿಸಲಾಗಿತ್ತು, ಸಿಎಂ ಆದರು.


ಈಗ ನನ್ನ ಸರದಿ ನನ್ನನ್ನೂ ಉಚ್ಛಾಟಿಸಲಾಗಿದೆ 2028ಕ್ಕೆ ನೋಡಬೇಕು ಸಿಎಂ ಆಗ್ತೀನೇನೋ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ಪಟ್ಟಣದ ಹಿಂದೂ ಮಹಾಗಣಪತಿ ಸಮಿತಿ 12ನೇ ವರ್ಷದ ಗಣೇಶೋತ್ಸವದ ಧರ್ಮ ಜಾಗೃತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಆದ ನಂತರ ಬಹಳಾ ಪಾಪ್ಯುಲರ್ ಆಗಿರಿ ಎಂದು ಜನರು ಹೇಳುತ್ತಾರೆ, ನಿಜ ಅಂದ್ರೆ ನಮ್ಮವರು ನಾನು ಪಾಪ್ಯುಲರ್ ಆಗಲೀ ಅಂತಾನೆ ಉಚ್ಚಾಟನೆ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ನಮ್ಮವರು ಅಡ್ಜಸ್ಟ್ಮೆಂಟ್ ಬಿಟ್ಟು ಧರ್ಮ ಉಳಿಸಲು ಒಂದಾಗಬೇಕು. ಸನಾತನ ಧರ್ಮವನ್ನು ಅಪವಿತ್ರ ಮಾಡುವವರನ್ನು, ಧರ್ಮವನ್ನು ಅವಹೇಳನ ಮಾಡುವವರ ವಿರುದ್ಧ ಹೋರಾಟ ನಿಶ್ಚಿತ. ರಾಜ್ಯದಲ್ಲಿ ಎಲ್ಲ ಸಮುದಾಯಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತ ನಾಯಕತ್ವ ಬೇಕಿದೆ.

ಧರ್ಮಸ್ಥಳದ ಸಮೀರ್‌ಗೆ ಗುಡ್ ಎಂದು ಲೈಕ್ ಕೊಟ್ಟವರು ನಮ್ಮವರೇ. ಗಣಪತಿ ಉತ್ಸವಕ್ಕೆ ನೂರಾರು ಕಂಡೀಷನ್ ಹಾಕ್ತಾರೆ. ಆದರೆ, ದಿನಕ್ಕೆ ಐದು ಭಾರಿ ಮೈಕ್ ಹಾಕುವವರಿಗೆ ಏನೂ ಅನ್ನೋಲ್ಲ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ