LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ : ಡಿಕೆ ಶಿವಕುಮಾರ್ 

Advertisement
ಬೆಂಗಳೂರು : ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು.

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು.

ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ.

ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ ಗುಡ್ಡೆ ಬಿಟ್ ಹೋಗಬೇಕು. ನಾವೂ ಕೂಡಾ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದೀವಿ. ನಿಮ್ಮ ಒತ್ತಡಕ್ಕೆ ಬ್ರೇಕ್‌ಫಾಸ್ಟ್ ಎಲ್ಲ, ನಮಗೇನೂ ಅಗತ್ಯ ಇಲ್ಲ. ನಮ್ಮಲ್ಲಿ ಯಾವುದೇ ಗುಂಪಿಲ್ಲ. 140 ಜನರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡ್ತಿದೀವಿ ಎಂದು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ