LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದರೆ ಪ್ರೋತ್ಸಾಹ ಧನ : ಆಂಧ್ರ ಸಿಎಂ ಆಫರ್

Advertisement
ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಜನರಿಗೆ ಬಂಪರ್ ಆಫರ್ ವೊಂದನ್ನು ನೀಡಿದ್ದು, ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದರೆ ಅಂತಹ ಕುಟುಂಬಗಳಿಗೆ ಸರ್ಕಾರದ ಕಡೆಯಿಂದ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರನ್ನು ಪಂಚಾಯತ್ ಮತ್ತು ಪುರಸಭೆಯ ಚುನಾವಣೆಗಳಲ್ಲಿ ಅನರ್ಹರೆಂದು ಪರಿಗಣಿಸಲಾಗಿತ್ತು.

ಈಗ ಈ ನೀತಿಯನ್ನು ರದ್ದುಗೊಳಿಸಲಾಗಿದೆ ಮತ್ತು ಹೆಚ್ಚಿನ ಮಕ್ಕಳನ್ನು ಹೊಂದಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

2023 ರಲ್ಲಿ, ಸಿಕ್ಕಿಂ ಸರ್ಕಾರವು ಸ್ಥಳೀಯ ಜನರು ಹೆಚ್ಚಿನ ಮಕ್ಕಳನ್ನು ಹೊಂದಲು ಪ್ರೋತ್ಸಾಹ ಧನವನ್ನು ಘೋಷಿಸಿತ್ತು. ಮಿಜೋರಾಂ ಕೂಡ ಬುಡಕಟ್ಟು ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸುತ್ತಿದೆ. ಅದರಂತೆ ದಕ್ಷಿಣ ಭಾರತದಲ್ಲೂ ಈ ನೀತಿ ಅಳವಡಿಸಿಕೊಳ್ಳಬೇಕು ಎಂದು ಚಂದ್ರಬಾಬು ತಿಳಿಸಿದರು.

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದರೆ ಅಂತಹ ಕುಟುಂಬಕ್ಕೆ ಸರ್ಕಾರದಿಂದಲೇ ಅಗತ್ಯ ಸೌಲಭ್ಯ ನೀಡಲಾಗುವುದು ಎಂದು ಹೇಳಿದರು.

ಉದ್ಯೋಗಿ ತಾಯಂದಿರು ಮಕ್ಕಳನ್ನು ನೋಡಿಕೊಳ್ಳುವಲ್ಲಿ ಸಹಾಯ ಪಡೆಯಲು ರಾಜ್ಯ ಸರ್ಕಾರವು ಎಲ್ಲಾ ಸಂಸ್ಥೆಗಳು ಕೆಲಸದ ಸ್ಥಳಗಳಲ್ಲಿ ಮಕ್ಕಳ ಆರೈಕೆ ಕೇಂದ್ರಗಳನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ ಎಂದು ಹೇಳಿದರು.

ಅಷ್ಟೇ ಅಲ್ಲದೆ ಶಾಲೆಗೆ ಹೋಗುವ ಪ್ರತಿ ಮಗುವಿಗೆ 15 ಸಾವಿರ ರೂಪಾಯಿ ನೀಡಲಾಗುವುದು ಹಾಗೂ ಶಿಕ್ಷಣವನ್ನು ಉತ್ತೇಜಿಸುವ ಮತ್ತು ಕುಟುಂಬಗಳಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಈ ಸಹಾಯವನ್ನು ನೀಡಲಾಗುತ್ತದೆ ಎಂದು ಸಿಎಂ ಚಂದ್ರಬಾಬು ನಾಯ್ಡು ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ