Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡಹಟ್ಟಿಯಲ್ಲಿ ಬ್ಯಾಟಿಂಗ್ ಮಾಡಿ ಕ್ರಿಕೆಟ್ ಟೂರ್ನಿ ಉದ್ಘಾಟನೆ 

ಕ್ರೀಡಾಸ್ಪೂರ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ : ದೊಡ್ಡಾಘಟ್ಟ ಚಂದ್ರೇಶ್

Advertisement

ತುರುವೇಕೆರೆ : ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಸೋತವರು ಕುಗ್ಗದೆ ಗೆದ್ದವರು ಬೀಗದೆ ಕ್ರೀಡಾಸ್ಪೂರ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕೆಂದು ಜೆಡಿಎಸ್ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್ ತಿಳಿಸಿದರು. 

ತಾಲ್ಲೂಕಿನ ದಂಡಿನಶಿವರ ಹೋಬಳಿ ದೊಡ್ಡಹಟ್ಟಿ ಗ್ರಾಮದ ಎಸ್.ಕೆ.ಎಸ್. ಕ್ರಿಕೆರ್ಸ್ ವತಿಯಿಂದ 10 ನೇ ವರ್ಷದ ಟೆನ್ನಿಲ್ ಬಾಲ್ ಕ್ರಿಕೆಟ್ ಲೀಗ್ ಟೂರ್ನಿಮೆಂಟಲ್ಲಿ ಬ್ಯಾಟಿಂಗ್ ಮಾಡಿ ಯುವಕರಲ್ಲಿ ಸ್ಪೂರ್ತಿ ತುಂಬುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಆ ಪ್ರತಿಭೆಯನ್ನು ಹೊರಹಾಕುವುದಕ್ಕೆ ಇಂತಹ ವೇದಿಕೆಗಳು ಅತ್ಯಗತ್ಯ. 10 ನೇ ತರಗತಿ ಫೇಲ್ ಆಗಿದ್ದ ಸಚಿನ್ ತೆಂಡೂಲ್ಕರ್ ತನ್ನಲ್ಲಿದ್ದ ಅಪ್ರತಿಮ ಕ್ರಿಕೆಟ್ ಕೌಶಲ್ಯದಿಂದ ಇಂದು ವಿಶ್ವ ಮಟ್ಟದಲ್ಲಿ ಕ್ರಿಕೆಟ್ ದೇವರು ಎನಿಸಿಕೊಳ್ಳಲು ಸಾಧ್ಯವಾಯಿತು. 3ನೇ ತರಗತಿಯಷ್ಟೇ ಓದಿದ್ದ ಮುತ್ತುರಾಜ್ ತಮ್ಮ ಕಲಾ ಕೌಶಲ್ಯದಿಂದ ಕನ್ನಡ ನಾಡಿನಲ್ಲಿ ಡಾ.ರಾಜ್ ಕುಮಾರ್ ಆಗಿ ಕನ್ನಡಿಗರ ಹೃದಯ ಸಿಂಹಾಸನದಲ್ಲಿ ಸ್ಥಾನ ಪಡೆದಿದ್ದಾರೆ. ಆದ್ದರಿಂದ ಯುವ ಸಮೂಹ ತಮ್ಮಲ್ಲಿರುವ ಪ್ರತಿಭೆಯನ್ನು ಓರೆಗೆ ಹಚ್ಚುವ ಕೆಲಸವನ್ನು ಮಾಡಬೇಕು ಎಂದರು.

ಇಂದು ಕ್ರಿಕೆಟ್ ಮಾತ್ರವಲ್ಲ ಯಾವುದೇ ಕ್ರೀಡೆ ವ್ಯಕ್ತಿಯ ಮಾನಸಿಕ, ದೈಹಿಕ ಆರೋಗ್ಯಕ್ಕೆ ಬಹಳ ಸಹಕಾರಿಯಾದುದು. ಅಲ್ಲದೆ ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗಾವಕಾಶ ದೊರೆಯುತ್ತದೆ. ಯಶಸ್ಸನ್ನು ಸಾಧಿಸಬೇಕಾದರೆ ತಮ್ಮ ಗಮನ ಗುರಿಯೆಡೆಗೆ ಇರಬೇಕು. ಗುರಿ ಸಾಧಿಸುವ ಹಾದಿಯಲ್ಲಿ ಬರುವ ಸೋಲು, ಅವಮಾನ ಎಲ್ಲವನ್ನೂ ಬದಿಗೆ ಸರಿಸಿ ಸನ್ಮಾನ, ಯಶಸ್ಸಿನೆಡೆಗೆ ದಾಪುಗಾಲಿಟ್ಟಾಗ ಮಾತ್ರ ಸಾಧಕನಾಗಲು ಸಾಧ್ಯ ಎಂದರು. 

ಎಸ್.ಕೆ.ಎಸ್. ಕ್ರಿಕೆರ್ಸ್ ವತಿಯಿಂದ ದೊಡ್ಡಾಘಟ್ಟ ಚಂದ್ರೇಶ್ ಅವರನ್ನು ಸನ್ಮಾನಿಸಲಾಯಿತು. ದೊಡ್ಡಹಟ್ಟಿ ಗ್ರಾಮದ ಸ್ವಾಮಿ, ಶಾಂತಕುಮಾರ್, ಮಹಲಿಂಗಣ್ಣ, ರವೀಶ್, ಪ್ರದೀಪ್, ಜಗದೀಶ್, ಕಾಂತರಾಜು, ನಾಗರಾಜು, ಎಸ್.ಕೆ.ಎಸ್. ಕ್ರಿಕೆರ್ಸ್ ನ ಪದಾಧಿಕಾರಿಗಳು, ಗ್ರಾಮಸ್ಥರು, ವಿವಿಧ ಗ್ರಾಮಗಳ ಕ್ರಿಕೆಟ್ ತಂಡದ ಆಟಗಾರರು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್