LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗುರುಮಠಕಲ್‌ನಲ್ಲಿ ಕುರಿ ಸಂತೆ ಆರಂಭಿಸಿ; ರಸ್ತೆ ಬದಿಯ ಅಕ್ರಮ ವ್ಯಾಪಾರಕ್ಕೆ ಕಡಿವಾಣ ಹಾಕಿ

ರೈತರ ಅನುಕೂಲಕ್ಕಾಗಿ ಕೃಷಿ ಮಾರುಕಟ್ಟೆಯಲ್ಲಿ ಕುರಿ ಸಂತೆ ಆರಂಭಿಸುವಂತೆ ಆಗ್ರಹ – ಬಸ್ ನಿಲ್ದಾಣ ಸುತ್ತಮುತ್ತ ತರಕಾರಿ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಉಮೇಶ್ ಕೆ. ಮುದ್ನಾಳ್ ಒತ್ತಾಯ

Advertisement

ಗುರುಮಠಕಲ್: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ್ ಅವರು ತಾಲೂಕಿನ ಕೃಷಿ ಮಾರುಕಟ್ಟೆಯಲ್ಲಿ ಎತ್ತಿನ ಸಂತೆಯ ಜೊತೆಗೆ ಕುರಿ ಸಂತೆಯನ್ನೂ ಆರಂಭಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುಮಠಕಲ್ ಹಾಗೂ ಸುತ್ತಮುತ್ತಲಿನ ರೈತರು ಮತ್ತು ಕುರಿ ಸಾಕಾಣಿಕೆದಾರರು ಕುರಿಗಳನ್ನು ಖರೀದಿಸಲು ಸುಮಾರು 50 ಕಿಲೋಮೀಟರ್‌ಗಳಷ್ಟು ದೂರ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಆದ್ದರಿಂದ ಗುರುಮಠಕಲ್‌ನಲ್ಲಿ ಪ್ರತಿ ಸೋಮವಾರ ನಡೆಯುವ ಎತ್ತಿನ ಸಂತೆಯ ಜೊತೆಗೆ ಕುರಿ ಸಂತೆಯನ್ನೂ ಆರಂಭಿಸಿದರೆ ರೈತರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು. ಅಲ್ಲದೆ, ದನ-ಕರುಗಳ ಸಂತೆಗೆ ಅಗತ್ಯವಾದ ಕುಡಿಯುವ ನೀರು, ನೆರಳು, ವಿಶ್ರಾಂತಿ ಸ್ಥಳ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಒತ್ತಾಯಿಸಿದರು.
"ದೇಶವನ್ನು ಸೈನಿಕರು ಕಾಪಾಡಿದರೆ, ದೇಶದ ಜನತೆಗೆ ಅನ್ನ ನೀಡುವವರು ರೈತರು. ರೈತರು ದೇಶದ ಬೆನ್ನೆಲುಬಾಗಿದ್ದು, ಅವರಿಗೆ ಸರ್ಕಾರ ಮತ್ತು ಅಧಿಕಾರಿಗಳು ಮೊದಲ ಆದ್ಯತೆ ನೀಡಬೇಕು" ಎಂದು ಉಮೇಶ್ ಕೆ. ಮುದ್ನಾಳ್ ಹೇಳಿದರು.

ವರದಿ : ರವಿ ಬುರನೋಳ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST