LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿರ್ಚಾದಿಂದ ಜನಾಕ್ರೋಶ ಮಹಿಳಾ ಪ್ರತಿಭಟನೆ

Advertisement

ಸೇಡಂ: ಕೇಂದ್ರ ಸರಕಾರವು ಐತಿಹಾಸಿಕವಾಗಿ ಜಾರಿಗೆ ತಂದಿರುವ ಶೇ.33 ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ದಿನಗಳಲ್ಲಿ ಮಹಿಳೆಯರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಸಂತೋಷಿರಾಣಿ ರಾಜಕುಮಾರ ಪಾಟೀಲ ತೆಲ್ಕೂರ ಹೇಳಿದರು.

ನಗರದಲ್ಲಿ ಬಿಜೆಪಿ ಮಹಿಳಾ ಘಟಕದಿಂದ ಕಾಂಗ್ರೆಸ್ ವಿರುದ್ಧ ನಾರಿ ಶಕ್ತಿ ಫೋರಂ ಜನಾಕ್ರೋಶ ಮಹಿಳಾ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟು ಇರುವ ಮಹಿಳೆಯರಿಗೆ ರಾಜಕೀಯ ಪ್ರಾಧಾನ್ಯತೆ ನೀಡಲು ಪ್ರಧಾನಿ ನರೇಂದ್ರ ಮೋದಿ ಬದ್ದರಾಗಿದ್ದಾರೆ. ಆದರೆ, ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಈ ಮಸೂದೆಗೆ ಅಡ್ಡಗಾಲು ಹಾಕುವ ಮೂಲಕ ತಮ್ಮ ಮಹಿಳಾ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತಿವೆ ಎಂದರು.

ಸೇಡಂ ಶಾಸಕ ಶರಣಪ್ರಕಾಶ್ ಪಾಟೀಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಡಿಸಿಸಿ ಬ್ಯಾಂಕ್ ಮೂಲಕ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡುವ ಯೋಜನೆಯನ್ನು ತಡೆಯಲು ಶಾಸಕರು ಪತ್ರ ಬರೆದಿದ್ದಾರೆ. ಇದು ಅವರು ಮಹಿಳಾ ಅಭಿವೃದ್ಧಿಯ ವಿರೋಧಿ ಎಂಬುದಕ್ಕೆ ಸಾಕ್ಷಿ ಎಂದು ಆರೋಪಿಸಿದರು.

ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ತಾಲೂಕು ಅಧ್ಯಕ್ಷ ಶರಣು ಶಂಕರ ಮೆಡಿಕಲ್, ಎಸ್ ಸಿ ಎಸ್ಟಿ ಘಟಕದ ಜಿಲ್ಲಾ ಉಪಾಧ್ಯಕ್ಷ ಶಿವಕುಮಾರ ತೊಟ್ನಳ್ಳಿ, ಓಂಪ್ರಕಾಶ್ ಪಾಟೀಲ, ತಿರುಪತಿ ಶಬಾದಕರ್‌, ನಾಗಪ್ಪ ಕೊಳ್ಳಿ, ರಾಜು ಕಟ್ಟಿ, ಸಂಗಪ್ಪ ಕುಂಬಾರ, ಶರಣಪ್ಪ ಕೊಳ್ಳಿ, ಸಿದ್ದು ಊಡಗಿ, ಮಹಾವೀರ ಅಳ್ಳೊಳ್ಳಿ, ವಿಜಯ ಕುಮಾರ ಪಾಟೀಲ್, ರಾಮು ಕಣೆಕಲ್, ವಿರೇಶ ಹೂಗಾರ, ರಾಘವೇಂದ್ರ ಮೆಕ್ಯಾನಿಕ್, ವಿನೋದ ಸಾಹುಕಾರ್, ಮಹಾದೇವಪ್ಪ ಗೋಣಿ, ಬಾಲರಾಜ ಕೊಡಸಾ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಗೌರಿ ಚಿತಕೊಟಿ, ತಾಲೂಕಾಧ್ಯಕ್ಷ ಶೈಲಜಾ ಹಿತ್ತಲ, ಮಹಾನಂದ, ಚನ್ನಮ್ಮ ಪಾಟೀಲ, ಶಿಲ್ಪಾ ಮಾಲಿಪಾಟೀಲ, ಭಾಗ್ಯಶ್ರೀ ನಾಯಿಕೊಡಿ ಸೇರಿದಂತೆ ಅನೇಕರಿದ್ದರು.

ವರದಿ :ವೆಂಕಟಪ್ಪ ಕೆ ಸುಗ್ಗಾಲ್.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ