LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆಗೆ ಮಹೇಶ ಕುಮಟಳ್ಳಿ ಖಂಡನೆ

Advertisement
ಬೆಳಗಾವಿ:  ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ್ಯ ನಿಂಗಪ್ಪ ಕರೆಣ್ಣವರ ಮೇಲೆ ಹಲ್ಲೆ ನಡೆದ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಮೊದಲು ಶಾಸಕ  ಲಕ್ಷ್ಮಣ ಸವದಿ ಅವರು ಅವರ ವಿರೋಧಿಗಳನ್ನು ಮೊದಲು ಯಾರಿಂದಾದರು ಹಲ್ಲೆ ಮಾಡಿಸುತ್ತಿದ್ದರು. ಈಗ ಅವರೇ ಮಾಡುತ್ತಿದ್ದಾರೆ. ಒಬ್ಬ ಶಾಸಕರಾಗಿ ಡಿಸಿಸಿ ಬ್ಯಾಂಕ್ ನೌಕರನ ಮೇಲೆ‌ ಹಲ್ಲೆ ಮಾಡಿದ್ದು ಖಂಡಿಸುತ್ತೇನೆ. ಅಥಣಿ ತಾಲೂಕು ಬಿಹಾರ ಆಗುತ್ತಿದೆ. ಯಾರು ಕಾನೂನು ಕೈಗೆತ್ತಿಕೊಂಡಿದ್ದಾರೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ತಮ್ಮ ಅಳಿಯನ ವರ್ಗಾವಣೆ ವಿಚಾರ ಸಂಬಂಧವೇ ಡಿಸಿಸಿ ಬ್ಯಾಂಕ್ ನೌಕರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಮೊದಲು ಮಹಿಳೆಯರ ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪ ಮಾಡಿದ್ದಾರೆ. ಬಿಜೆಪಿ ಬೆಂಬಲಿಗರ ಕುಟುಂಬಕ್ಕೂ ಲಕ್ಷ್ಮಣ ಸವದಿ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿದರು.

ಎಲ್ಲಾ ವಿಷಯ ಗೋಕಾಕದವರು ಪ್ರಚೋದನೆ ಮಾಡಿದ್ದಾರೆ ಅಂತಾರೇ, ಶಾಸಕ ಸವದಿ ಅವರಿಗೆ ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ್ಯ ನಿಂಗಪ್ಪ ಕರೆಣ್ಣವರ ಮನೆಗೆ ಬಂದಾಗ ಗೋಕಾಕದವರು  ಹಲ್ಲೆ ಮಾಡು ಅಂತಾ ಹೇಳಿದ್ದರಾ?. ಒಬ್ಬ ಶಾಸಕನಾದವನಿಗೆ ತಮ್ಮದೇ ಆದ ಜವಾಬ್ದಾರಿಗಳು ಇರುತ್ತವೆ. ಜವಾಬ್ದಾರಿ ಮೆರೆತು ವರ್ತಿಸಬಾರದು ಎಂದು ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ