LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಾನು ಬಿಜೆಪಿ ಸೇರುತ್ತೇನೆ ಎನ್ನುವರೇ ಮುಂದೆ ಜೆಡಿಎಸ್ ಸೇರಲಿದ್ದಾರೆ : ಲಕ್ಷ್ಮಣ ಸವದಿ

Advertisement
ಬೆಳಗಾವಿ : ನನ್ನ ಕ್ಷೇತ್ರದಲ್ಲಿ ನಾಳೆ ಅನೇಕ ಕೆಲಸ ಕಾರ್ಯಗಳಿವೆ. ಪೂರ್ವ ನಿಗದಿತ ಕಾರ್ಯಕ್ರಮಗಲ್ಲಿ ಭಾಗಿಯಾಗಬೇಕಿದೆ.ಹೀಗಾಗಿ, ನಾನು ದೆಹಲಿಗೆ ಹೊರಟಿಲ್ಲ. ಸಚಿವ ಸ್ಥಾನದ ಬಗ್ಗೆ ವರಿಷ್ಠರು ಎಲ್ಲ ತೀರ್ಮಾಣ ಕೈಗೊಳ್ಳಲಿದ್ದಾರೆ.

ನಾನು ಬಿಜೆಪಿಗೆ ಬರುತ್ತೇನೆ ಎಂದು ಯಾರು ಹೇಳುವವರೇ ಬಿಜೆಪಿಯಲ್ಲಿ ಬಹಳ ದಿನ ಇರಲ್ಲ.ಮುಂದೆ ಜೆಡಿಎಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಮಾಜಿ ಡಿಸಿಎಂ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಬೆಳಗಾವಿಯ ಸರ್ಕಿಟ್‌ ಹೌಸ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ.

ದುರದುದ್ದೇಶದಿಂದ ಕೆಲವು ಜನ ಕೆಲಸ ಇಲ್ಲದ್ದಕ್ಕೇ ಏನೇನೋ ಚರ್ಚೆ ಮಾಡುತ್ತಿದ್ದಾರೆ. ಅಂತಹುದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಬಗ್ಗೆ ಮಾತನಾಡುವವರೇ ಬೇರೆ ಪಕ್ಷಕ್ಕೆ ಹೋಗುವ ಚಿಂತನೆಯಲ್ಲಿದ್ದಾರೆ.

ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಹೀಗಿರುವಾಗ ನನ್ನ ಬಗ್ಗೆ ಅನುಮಾನಗಳೇಕೆ?. ಕೆಲವರು ಕೆಲಸ ಇಲ್ಲದ್ದಕ್ಕೆ ತಲೆ ಬುಡ ಇಲ್ಲದ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ.

ನನಗೆ ಮೈತುಂಬು, ಕೈತುಂಬ ಕೆಲಸವಿದೆ. ಹೀಗಾಗಿ ಬೇರೆಯವರು ಆಡುವ ಮಾತುಗಳಿಗೆ, ಆರೋಪಗಳಿಗೆ ನಾನು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದರು.

ಈಚೆಗೆ ಅಥಣಿಯಲ್ಲಿ ಹೇಳಿಕೆ ನೀಡಿದ್ದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷ ಸೇರಿರುವ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ವದಂತಿ ಹಬ್ಬಿಸುವ ಮೂಲಕ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಕೆಲಸ ನಡೆದಿದೆ. ಸವದಿ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ. ಸೇರಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ