LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇನ್ಮುಂದೆ ಶಿಕ್ಷಣ, ಕೈಗಾರಿಕೆಗೆ ಜಮೀನು ಖರೀದಿ ಅನುಮತಿ ಡಿಸಿ ಕೈಯಲ್ಲಿ : ವಿಧೇಯಕ ಮಂಡನೆ 

Advertisement
ಬೆಂಗಳೂರು: ಖಾಸಗಿ ವ್ಯಕ್ತಿಗಳ ಕೃಷಿ ಜಮೀನನ್ನು ಶಿಕ್ಷಣ ಸಂಸ್ಥೆಗಳು ಅಥವಾ ಸಣ್ಣ ಉದ್ದಿಮೆ/ಕೈಗಾರಿಕೆಗಳಿಗೆ ಖರೀದಿಸಲು ಸೆಕ್ಷನ್‌ 109ರ ಅಡಿಯಲ್ಲಿ ಈ ಹಿಂದೆಯೇ ಅನುಮತಿ ನೀಡಲಾಗಿದೆ.

ಆದರೆ, ಆ ಅನುಮತಿಗಾಗಿ ಅವರು ಸರ್ಕಾರ ಮುಖ್ಯ ಕಾರ್ಯದರ್ಶಿ ವರೆಗೆ ಬರುವಂತಿದೆ.ಈಗಿನ ನೂತನ ತಿದ್ದುಪಡಿಯಲ್ಲಿ ಆ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೇ ನೀಡಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ವಿಧಾನಸಭಯಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದಂತ ಅವರು, ಸಣ್ಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳೇ 4 ಹೆಕ್ಟೇರ್‌ ವರೆಗಿನ ಭೂಮಿ ಖರೀದಿಗೆ ಅನುಮತಿ ನೀಡಬಹುದು. ಹೀಗೆ ನೀಡುವ ಅನುಮತಿ ಆಟೋಮ್ಯಾಟಿಕ್ ಭೂ-ಪರಿವರ್ತನೆಯಾಗಿರುತ್ತದೆ.‌

ಇದಲ್ಲದೆ, ಈ ಹಿಂದೆ ಸಣ್ಣ ಉದ್ದಿಮೆದಾರರು/ಶಿಕ್ಷಣ ಸಂಸ್ಥೆಗಳು ಭೂಮಿಯನ್ನು ಏನೋ ಉದ್ದೇಶಕ್ಕೆ ತಗೊಂಡು ಇನ್ನೇನೋ ಉದ್ದೇಶಕ್ಕೆ ಬಳಸಲೂ ಸಹ ನಮ್ಮ ಬಳಿ ಅನುಮತಿ ಕೇಳುತ್ತಾರೆ. ಆದರೆ, ಅದಕ್ಕೆ ಅನುಮತಿ ನೀಡುವುದು ಅವಕಾಶ ಇರಲಿಲ್ಲ. ಪ್ರಸ್ತುತ ಅದಕ್ಕೂ ಅವಕಾಶ ನೀಡಲಾಗಿದೆ ಎಂದರು.

ಕರ್ನಾಟಕದಲ್ಲಿ ಎಲ್ಲೇ ಆಗಲಿ 2 ಎಕರೆ ವರೆಗೆ ಕೈಗಾರಿಗೆ ಮಾಡಲು ಪರಿವರ್ತನೆಗೆ ವಿನಾಯಿತಿ ನೀಡಲಾಗುತ್ತದೆ. ಸಣ್ಣ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ತಿದ್ದುಪಡಿಯನ್ನು ತರಲಾಗಿದೆ.

ನವೀಕರಿಸಬಹುದಾದ ಇಂಧನ ಕ್ಷೇತ್ರ ಪ್ರಸ್ತುತ ಉದಯೋನ್ಮುಖ ವಲಯ. ದೇಶದ ಆದ್ಯತೆ ಕಲ್ಲಿದ್ದಲಿಂದ ನವೀಕರಿಸಬಹುದಾದ ಇಂಧನ ಕ್ಷೇತ್ರದ ಕಡೆ ಬದಲಾಗಬೇಕು ಎಂಬುದು ಸರ್ಕಾರದ ಹಾಗೂ ಜನ ಸಾಮಾನ್ಯರ ಆದ್ಯತೆ.

ಸೋಲಾರ್, ಪವನ ಶಕ್ತಿ ಘಟಕ ಸ್ಥಾಪಿಸಲು ಅನುಮತಿ ಕೊಡಿಸುವ ನೆಪದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬುದಾಗಿ ಕಳವಳ ವ್ಯಕ್ತ ಪಡಿಸಿದರು.

ಇದರಿಂದ ಸಣ್ಣ ಉದ್ದಿಮೆದಾರರು ಮಧ್ಯವರ್ತಿಗಳ ಕಾಟಕ್ಕೆ ಬೇಸತ್ತಿದ್ದರೆ, ಸೋಲಾರ್ ಹಾಗೂ ಪವನ ಶಕ್ತಿ ವಿಂಡ್ ಮಿಲ್ ಸ್ಥಾಪಿಸುವ ಉದ್ದಿಮೆದಾರರ ಬಂಡವಾಳ ಹೂಡಿಕೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಮಧ್ಯವರ್ತಿಗಳ ಉಪಟಳ ತಪ್ಪಿಸಿ ಬಂಡವಾಳ ಹೆಚ್ಚಿಸುವ ಸಲುವಾಗಿ ಆಟೋ ಕನ್‌ವರ್ಷನ್‌ಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಒತ್ತಾಯವೂ ಇತ್ತು. ಹೀಗಾಗಿ ಬಹಳ ದಿನಗಳ ಚರ್ಚೆಯ ನಂತರ ಕಾನೂನಿನಲ್ಲಿ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ