LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅನ್ನಪೂರ್ಣೇಶ್ವರಿ ನಗರದ ಶ್ರೀ ಸ್ವಯಂಭೂ ನಾಗನಾಥ ಮಂದಿರದಲ್ಲಿ ಮಹಾಶಿವರಾತ್ರಿ ಸಡಗರ: ಭವ್ಯ ಮಹಾಪ್ರಸಾದ ಸೇವೆ

Advertisement
ಬೆಳಗಾವಿ: ಕುಂದಾನಗರಿ ಬೆಳಗಾವಿಯ ಅನ್ನಪೂರ್ಣೇಶ್ವರಿ ನಗರದ 3ನೇ ಕ್ರಾಸ್, ಯಳ್ಳೂರು ರಸ್ತೆಯಲ್ಲಿ ನೆಲೆಸಿರುವ ಪುಣ್ಯಕ್ಷೇತ್ರ ಶ್ರೀ ಸ್ವಯಂಭೂ ನಾಗನಾಥ ಮಂದಿರವು ಈ ಸಾಲಿನ ಮಹಾಶಿವರಾತ್ರಿ ಮಹೋತ್ಸವಕ್ಕೆ ಸಂಪೂರ್ಣವಾಗಿ ಸಜ್ಜಾಗಿದೆ. ಪ್ರತಿವರ್ಷದ ಸಂಪ್ರದಾಯದಂತೆ ಈ ಬಾರಿಯೂ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ.

​ವಿಶೇಷ ಅಭಿಷೇಕ ಮತ್ತು ಪೂಜೆ:
ಬರುವ ಭಾನುವಾರ, ಅಂದರೆ ಫೆಬ್ರವರಿ 15, 2026 ರ ಮಹಾಶಿವರಾತ್ರಿಯ ಪವಿತ್ರ ದಿನದಂದು ಮುಂಜಾನೆ 7:00 ಗಂಟೆಗೆ ನಾಗನಾಥ ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಶತನಾಮಾವಳಿ ಹಾಗೂ ವಿಶೇಷ ಅಲಂಕಾರ ಸೇವೆಗಳು ನೆರವೇರಲಿವೆ. ಈ ಪವಿತ್ರ ಅಭಿಷೇಕ ಸೇವೆಯಲ್ಲಿ ಪಾಲ್ಗೊಂಡು ಪುನೀತರಾಗಲು ಇಚ್ಛಿಸುವ ಭಕ್ತಾದಿಗಳು ಕಡ್ಡಾಯವಾಗಿ ಶನಿವಾರ, ಫೆಬ್ರವರಿ 14 ರೊಳಗೆ ಮಂದಿರದ ಕಾರ್ಯಾಲಯದಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕೆಂದು ಮಂದಿರ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.



ಭವ್ಯ ಮಹಾಪ್ರಸಾದ (ಅನ್ನಸಂತರ್ಪಣೆ):
ಕಾರ್ಯಕ್ರಮದ ಮತ್ತೊಂದು ವಿಶೇಷತೆಯೆಂದರೆ, ಫೆಬ್ರವರಿ 16, ಸೋಮವಾರದಂದು ಭಕ್ತಾದಿಗಳಿಗಾಗಿ ಬೃಹತ್ ಮಹಾಪ್ರಸಾದ ಸೇವೆಯನ್ನು ಆಯೋಜಿಸಲಾಗಿದೆ. ಅಂದು ರಾತ್ರಿ 8:30 ರಿಂದ 10:30 ರವರೆಗೆ ಅನ್ನಪೂರ್ಣೇಶ್ವರಿ ನಗರ ಹಾಗೂ ಸುತ್ತಮುತ್ತಲಿನ ಸಮಸ್ತ ಸದ್ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ.
​ನಾಗದೇವರ ದರ್ಶನ ಪಡೆದು, ತೀರ್ಥ ಪ್ರಸಾದ ಸ್ವೀಕರಿಸಲು ಮತ್ತು ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗಲು ಸಾರ್ವಜನಿಕರಿಗೆ ಹಾರ್ದಿಕವಾಗಿ ಆಮಂತ್ರಿಸಲಾಗಿದೆ. ಶಿಸ್ತುಬದ್ಧವಾಗಿ ಸಾಲಿನಲ್ಲಿ ನಿಂತು ನಾಗನಾಥನ ಕೃಪೆಗೆ ಪಾತ್ರರಾಗಬೇಕೆಂದು ಈ ಮೂಲಕ ವಿನಂತಿಸಿಕೊಳ್ಳಲಾಗಿದೆ.
​ಸ್ಥಳ: ಶ್ರೀ ಸ್ವಯಂಭೂ ನಾಗನಾಥ ಮಂದಿರ,3ನೇ ಕ್ರಾಸ್, ಅನ್ನಪೂರ್ಣೇಶ್ವರಿ ನಗರ,ಯಳ್ಳೂರು ರೋಡ್, ಬೆಳಗಾವಿ.ಅಧ್ಯಕ್ಷರಾದ ನಾಗೆಶ ಮಲಜಿ ಸೌ. ಆಶಾ ದೇಸಾಯಿ ಶ್ರೀ ಶೇರು ಭಾದವಣಕರ

ವರದಿ :ಮಹಂತೇಶ್ ಎಸ್. ಹುಲಿಕಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ