LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

​ಬೆಳಗಾವಿಯಲ್ಲಿ ರಂಜಾನ್ ಸಂಭ್ರಮ: ಅಂಜುಮನ್ ಇಸ್ಲಾಂ ಸಂಸ್ಥೆಯಲ್ಲಿ ಸಾಮೂಹಿಕ ಪ್ರಾರ್ಥನೆ

Advertisement
ಬೆಳಗಾವಿ: ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಪವಿತ್ರ ರಂಜಾನ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದರು. ತಿಂಗಳ ಕಾಲ ಉಪವಾಸ ವ್ರತ ಆಚರಿಸಿದ್ದ ಮುಸ್ಲಿಂ ಸಮುದಾಯದವರು, ಇಂದು ಹೊಸ ಬಟ್ಟೆ ಧರಿಸಿ ಸಂಭ್ರಮದಿಂದ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

​ಸಾಮೂಹಿಕ ಪ್ರಾರ್ಥನೆ: ಬೆಳಗಾವಿಯ ಪ್ರತಿಷ್ಠಿತ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಒಗ್ಗೂಡಿ ಸಾಮೂಹಿಕ ಪ್ರಾರ್ಥನೆ (ನಮಾಜ್) ಸಲ್ಲಿಸಿದರು. ಜಗತ್ತಿನಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸಲಿ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು.

​ಈ ಸಡಗರದ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜು ಸೇಠ್ ಹಾಗೂ ಪ್ರಮುಖ ಮುಖಂಡರಾದ ಅಮನ್ ಸೇಠ್ ಅವರು ಪಾಲ್ಗೊಂಡು ಸಮುದಾಯದವರಿಗೆ ಹಬ್ಬದ ಶುಭಾಶಯಗಳನ್ನು ಕೋರಿದರು.

​ಸೌಹಾರ್ದತೆ: ಪ್ರಾರ್ಥನೆಯ ನಂತರ ಮುಸ್ಲಿಂ ಬಾಂಧವರು ಪರಸ್ಪರ ಆಲಿಂಗಿಸಿಕೊಳ್ಳುವ ಮೂಲಕ ಭಾತೃತ್ವದ ಸಂದೇಶ ಸಾರಿದರು. ನಗರದ ವಿವಿಧ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆಗಳು ನಡೆದವು.
​"ರಂಜಾನ್ ಹಬ್ಬವು ಶಾಂತಿ, ಸಹಬಾಳ್ವೆ ಮತ್ತು ತ್ಯಾಗದ ಸಂಕೇತವಾಗಿದೆ. ಬೆಳಗಾವಿಯ ಈ ಸಾಮೂಹಿಕ ಪ್ರಾರ್ಥನೆಯು ನಗರದ ಭಾವೈಕ್ಯತೆಗೆ ಸಾಕ್ಷಿಯಾಗಿದೆ."

ವರದಿ: ಮಹಾಂತೇಶ್ ಎಸ್ ಹುಲಿಕಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ