LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಅಂಧ ಮಹಿಳೆಯರ ಟಿ-20 ವಿಶ್ವಕಪ್ ಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

Advertisement
ಬೆಂಗಳೂರು: ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ ಮೈದಾನದಲ್ಲಿ ನಡೆಯುತ್ತಿರುವ ಅಂಧ ಮಹಿಳೆಯರ ಮೊದಲ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರಿಯಾಗಿ ಕೈಕಾಲು ಇದ್ದರೂ, ಕಣ್ಣುಗಳು ಕಾಣಿಸಿದರೂ ಸಾಮಾನ್ಯ ಜನರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಕಷ್ಟ.ಆದರೆ, ಸರಿಯಾಗಿ ಕಣ್ಣುಕಾಣದ ಮಕ್ಕಳು ಕ್ರಿಕೆಟ್‌ ಆಡುವುದು ಅಷ್ಟು ಸುಲಭವಲ್ಲ ಎಂದರು.

ಈ ಮಹತ್ವದ ಟೂರ್ನಿಯ ಪ್ರಮುಖ ಭಾಗವನ್ನು ಬೆಂಗಳೂರಿನಲ್ಲಿ ಆಯೋಜಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ನಮ್ಮ ರಾಜ್ಯವು ಕ್ರೀಡೆಗೆ ಸಮಾನ ಅವಕಾಶಗಳನ್ನು ಉತ್ತೇಜಿಸುವಲ್ಲಿ ಮುಂಚೂಣಿಯಲ್ಲಿರುವುದು ಎಲ್ಲರೂ ತಿಳಿದಿರುವ ವಿಷಯ. ನಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಇದೇ ವೇಳೆ ಭಾರತ ಹಾಗೂ ನೇಪಾಳ ನಡುವಿನ ಪಂದ್ಯವನ್ನು ಕೆಲಕಾಲ ಸಚಿವರು ವೀಕ್ಷಿಸಿದರು. ಚಪ್ಪಾಳೆ ತಟ್ಟುವ ಮೂಲಕ ಎರಡೂ ತಂಡಗಳ ಆಟಗಾರ್ತಿಯರನ್ನು ಹುರಿದುಂಬಿಸಿದರು. ಬಳಿಕ ಕೆಲಕಾಲ ಪಂದ್ಯದ ವೀಕ್ಷಕ ವಿವರಣೆಯಲ್ಲಿ ಪಾಲ್ಗೊಂಡರು.

ಈ ವೇಳೆ ಸಮರ್ಥನಂ ಟ್ರಸ್ಟ್ ಸಂಸ್ಥಾಪಕರಾದ ಡಾ.ಮಹಾಂತೇಶ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ