LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕುದಲೆಳೆ ಅಂತರದಲ್ಲಿ ಪಾರಾದ ಸಚಿವ ಸತೀಶ್ ಜಾರಕಿಹೊಳಿ

Advertisement
ಹಾವೇರಿ: ಭಾರಿ ಸುಂಟರಗಾಳಿಗೆ ಬೃಹತ್ ಪೆಂಡಾಲ್ ಹಾರಿ ಬಿದ್ದಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕುದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಈ ಘಟನೆ ನಡೆದಿದೆ.

ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆಂದು ಬೃಹತ್ ಪೆಂಡಾಲ್ ಹಾಕಲಾಗಿತ್ತು.

ಕಾರ್ಯಕ್ರಮವನ್ನು ಮುಗಿಸಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಬಿರುಗಾಳಿ ಬೀಸಲಾರಂಭಿಸಿದೆ.

ಕಾರ್ಯಕ್ರಮಕ್ಕೆ ಹಾಕಿದ್ದ ಬೃಹತ್ ಪೆಂಡಾಲ್ ತರಗೆಲೆಯಂತೆ ಹಾರಿ ಬಿದ್ದಿದೆ. ಪೆಂಡಾಲ್ ಪಕ್ಕದಲ್ಲಿಯೇ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಕಾರ್ಯಕ್ರಮವನ್ನು ಮುಗಿಸಿ ವೇದಿಕೆಯಿಂದ ಹೊರಬಂದು ಸಚಿವರು ನಿಂತಿದ್ದರು. ಕೆಲವೇ ಸಮಯದಲ್ಲಿ ಸುಂಟರಗಾಳಿ ಬೀಸಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST