LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಲಂಚ ಪ್ರಕರಣ : ಶಾಸಕ ಡಾ. ಚಂದ್ರು ಲಮಾಣಿಗೆ ಜಾಮೀನು ಮಂಜೂರು

Advertisement

ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಸ್ವೀಕರಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.


ಪ್ರಕರಣದ ಹಿನ್ನೆಲೆ:

ರಸ್ತೆ ಕಾಮಗಾರಿಯ ಬಿಲ್ ವಿಲೇವಾರಿ ಮಾಡಲು ಗುತ್ತಿಗೆದಾರ ವಿಜಯ್ ಪೂಜಾರ್ ಅವರಿಂದ 11 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಆ ಪೈಕಿ 5 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಶಾಸಕರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದರು. ಕಳೆದ ಫೆಬ್ರವರಿ 21ರಂದು ಈ ದಾಳಿ ನಡೆದಿತ್ತು. ಶಾಸಕರ ಜೊತೆಗೆ ಅವರ ಇಬ್ಬರು ಆಪ್ತ ಸಹಾಯಕರನ್ನೂ ಬಂಧಿಸಲಾಗಿತ್ತು.

ನ್ಯಾಯಾಲಯದ ಆದೇಶ:

ಈ ಮೊದಲು ಶಾಸಕರಿಗೆ ನ್ಯಾಯಾಂಗ ಬಂಧನ ವಿಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ಶಾಸಕರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದ್ದಾರೆ.

!
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST