LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಸಬಾ ಹೋಬಳಿ ಕಾರೆಹಳ್ಳಿ ತಾಂಡ್ಯದ ಮೋನಿಕ ಅವರ ಸ್ವಗ್ರಾಮಕ್ಕೆ ಭೇಟಿ : ಶಾಸಕ ಕೆಎಂ ಶಿವಲಿಂಗೇಗೌಡರು

Advertisement
ಅರಸೀಕೆರೆ : ತಾಲೂಕು ಕಸಬಾ ಹೋಬಳಿ ಕಾರೆಹಳ್ಳಿ ತಾಂಡ್ಯದ ಮೋನಿಕ ಅವರ ಸ್ವಗ್ರಾಮಕ್ಕೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷರಾದ ಕೆಎಂ ಶಿವಲಿಂಗೇಗೌಡರು

ಸಂಜೆ 7:30 ರ ಸಮಯದಲ್ಲಿ ಭೇಟಿ ನೀಡಿ ದುಃಖಭರಿತ ಸಂದರ್ಭದಲ್ಲಿ ಭೇಟಿ ಮಾಡಿ ಕುಟುಂಬದ ನೋವಿನಲ್ಲಿ ಪಾಲುಗೊಂಡು ಆತ್ಮೀಯವಾಗಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿ ಮೋನಿಕಾ ರವರ ಕಳೆದುಕೊಂಡ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹಾರೈಸಿದರು.

ಅವರ ಕುಟುಂಬಕ್ಕೆ ವೈಯಕ್ತಿಕವಾಗಿ ₹25,000 ಧನಸಹಾಯವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ,ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿ ಕುಟುಂಬಕ್ಕೆ ತಲುಪಿಸುವುದಾಗಿ ಭರವಸೆ ನೀಡಿದರು.



ಮೃತಪಟ್ಟ ಮೋನಿಕ ಅವರು ತಮ್ಮ ಅಂಗಾಂಗ ದಾನದ ಮೂಲಕ ನಾಲ್ಕು ಜನರಿಗೆ ಜೀವದಾನ ನೀಡಿ ಅನನ್ಯ ಮಾನವೀಯತೆಯನ್ನು ತೋರಿದ್ದಾರೆ.

ತಮ್ಮ ಬದುಕಿನ ಕೊನೆಯ ಕ್ಷಣದಲ್ಲಿಯೂ ಇತರರ ಬದುಕಿಗೆ ಬೆಳಕು ನೀಡಿದ ಅವರ ಈ ಮಹಾನ್ ಕಾರ್ಯ ನಿಜಕ್ಕೂ ಶ್ಲಾಘನೀಯ. ಮೋನಿಕ ಅವರ ಈ ತ್ಯಾಗ ಮತ್ತು ದಾನ ಮನೋಭಾವವು ಸಮಾಜಕ್ಕೆ ಮಾದರಿಯಾಗಿ ಉಳಿದು, ಇನ್ನೂ ಅನೇಕರು ಅಂಗಾಂಗ ದಾನದ ಮಹತ್ವವನ್ನು ಅರಿತು ಮುಂದೆ ಬರಲು ಪ್ರೇರಣೆಯಾಗುತ್ತದೆ.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸಾಕಿ ಮಂಜುನಾಥ್, ಸುನಿಲ್ ನಾಯ್ಕ್, ಈಶ್ವರ್ ನಾಯ್ಕ್, ಕೃಷ್ಣ ನಾಯ್ಕ, ಹಾಗೂ ಬಂಜಾರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಜನಪ್ರತಿನಿಧಿಯಾಗಿ ಮಾತ್ರವಲ್ಲ, ಒಬ್ಬ ಮಾನವೀಯ ವ್ಯಕ್ತಿಯಾಗಿ ಅವರ ಈ ನಡೆ ಎಲ್ಲರ ಹೃದಯವನ್ನು ಸ್ಪರ್ಶಿಸಿದೆ.

ದುಃಖದಲ್ಲಿರುವ ಕುಟುಂಬಕ್ಕೆ ಧೈರ್ಯ ತುಂಬಿದ ಈ ಕಾರ್ಯ ನಿಜಕ್ಕೂ ಮಾನವೀಯತೆಯ ಶ್ರೇಷ್ಠ ಉದಾಹರಣೆಯಾಗಿದೆ.

ವರದಿ : ರಾಜು
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ