LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರ್ಕಾರಿ ಕಾಲೇಜು ಕಟ್ಟಡದ ಉದ್ಘಾಟಿಸಿದ ಶಾಸಕ ಸುಬ್ಬಾರೆಡ್ಡಿ

Advertisement

ಚೇಳೂರು: ಇಲ್ಲಿನ ಕೆ.ಪಿ.ಎಸ್ ಶಾಲಾ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭವು ಶುಕ್ರವಾರ ಅತ್ಯಂತ ಯಶಸ್ವಿಯಾಗಿ ನೆರವೇರಿತು.ಶಾಸಕ ಎಸ್.ಎಸ್. ಸುಬ್ಬಾರೆಡ್ಡಿ ಅವರು ನೂತನ ಸುಸಜ್ಜಿತ ಕಟ್ಟಡವನ್ನು ಅಧಿಕೃತವಾಗಿ ಸಾರ್ವಜನಿಕ ಲೋಕಾರ್ಪಣೆ ಮಾಡಿದರು.

ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು,ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಧೇಯದೊಂದಿಗೆ ಈ ಸುಸಜ್ಜಿತ ಕಾಲೇಜು ಕಟ್ಟಡವನ್ನು ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು ಈ ಮೂಲಸೌಕರ್ಯಗಳನ್ನು ಸರಿಯಾಗಿ ಬಳಸಿಕೊಂಡು, ಉತ್ತಮ ಸಾಧನೆ ಮಾಡುವ ಮೂಲಕ ಚೇಳೂರು ತಾಲೂಕಿಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.
news_1779516741_0_526.webp

 

ತಹಸೀಲ್ದಾರ್ ಶ್ವೇತಾ ಬಿ.ಕೆ.,ಇಒ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಇಲಾಖೆಗಳ ಪ್ರಮುಖರು,ಶಾಲಾ ಆಡಳಿತ ಮಂಡಳಿ, dss ಜಿಲ್ಲಾ ಸಂಚಾಲಕರಾದ ಕಡ್ಡಿಲ್ ವೆಂಕಟರಮಣ, ಹಾಲಿನ ಡೈರಿ ಅಧ್ಯಕ್ಷರಾದ ಜೆ ಎನ್ ಜಾಲಾರಿ, ಸುರೇಂದ್ರ, ಸಹದೇವರೆಡ್ಡಿ, ನಯಾಜ್ ಮೆಕಾನಿಕ್, ಶಂಕರ್ ರೆಡ್ಡಿ, ಎಚ್ ವಿ ನಾರಾಯಣ ಸ್ವಾಮಿ ಗಂಗಾಧರ್, ಸಾಹುಕಾರ್ ಶ್ರೀನಿವಾಸ್ ರೆಡ್ಡಿ ಹಾಗೂ ಮುಖಂಡರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ :ಯಾರಬ್. ಎಂ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST