LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕರ್ನಾಟಕ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ : ಆ. 11 ರಿಂದ ಆರಂಭ 

Advertisement
ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 11, 2025ರಿಂದ ಆರಂಭಗೊಳ್ಳಲಿದೆ. ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್.11ನೇ ದಿನಾಂಕದಂದು ಸೋಮವಾರ ಪೂರ್ವಾಹ್ನ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನೂ ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ದಿನಾಂಕ 11-08-2025ರ ಸೋಮವಾರ ಸರ್ಕಾರಿ ಕಾರ್ಯಕಲಾಪಗಳು ಎಂಬುದಾಗಿ ತಿಳಿಸಲಾಗಿದೆ. ಆಗಸ್ಟ್.11ರಿಂದ ಆರಂಭಗೊಂಡು ದಿನಾಂಕ 22-08-2025ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ