LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕೊಲೆ ಆರೋಪಿ ವಿನಯ್ ಕುಲಕರ್ಣಿ ಶಾಸಕತ್ವ ತಾನಾಗಿಯೇ ರದ್ದು

Advertisement

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಶಾಸಕತ್ವ ತಾನಾಗಿಯೇ ರದ್ದಾಗಿದೆ.

ಈ ಕುರಿತಾಗಿ ಮಾಹಿತಿ ನೀಡಿರುವ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ವಿಧಾನಸಭೆಯ ಯಾವುದೇ ಸದಸ್ಯರು ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಗಾದಾಗ ತಾನಾಗಿಯೇ ಅವರ ಶಾಸಕತ್ವ ರದ್ದಾಗುತ್ತದೆ.

ಅದರಂತೆಯೇ ವಿನಯ್ ಕುಲಕರ್ಣಿ ಅವರ ಸದಸ್ಯ ಸ್ಥಾನವೂ ರದ್ದಾಗಿದೆ. ಇಂತಹ ಸಂದರ್ಭದಲ್ಲಿ ಸ್ಪೀಕರ್ ಗೆ ಸದಸ್ಯತ್ವ ರದ್ದು ಮಾಡುವ ಅಧಿಕಾರ ಇರುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಖಾದರ್ ಅವರು, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋಷಿ ಎಂದು ನ್ಯಾಯಾಲಯ ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನದ ಅನರ್ಹತೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸಭೆ ಒಳಗೆ ಏನಾದರೂ ಘಟನೆಗಳು ನಡೆದಾಗ ಸದಸ್ಯರನ್ನು ಅನರ್ಹಗೊಳಿಸುವ ಅಧಿಕಾರ ಸ್ಪೀಕರ್ ಗೆ ಇದೆ. ಹೊರಗಿನ ವಿಚಾರಗಳಿಗೆ ಯಾವೊಬ್ಬ ಸದಸ್ಯನ ಸದಸ್ಯತ್ವ ರದ್ದು ಮಾಡುವ ಅಧಿಕಾರ ಸ್ಪೀಕರ್ ಗೆ ಇಲ್ಲ. ನಿಯಮದ ಪ್ರಕಾರ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ಶಾಸಕನ ಸದಸ್ಯತ್ವ ತಾನಾಗಿಯೇ ರದ್ದಾಗುತ್ತದೆ.

ಒಂದು ವೇಳೆ ನ್ಯಾಯಾಲಯದಲ್ಲಿ ದೋಷಿ ಎಂಬ ಆದೇಶಕ್ಕೆ ತಡೆ ನೀಡಿದಲ್ಲಿ ರದ್ದಾದ ಶಾಸಕ ಸ್ಥಾನ ತಾನಾಗಿಯೇ ವಾಪಸ್ ಬರುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ