LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಮೈಸೂರು-ಬೆಳಗಾವಿ ವಿಶೇಷ ರೈಲು

Advertisement
ಬೆಂಗಳೂರು: ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಊರಿಗೆ ಹೋಗುವವರಿಗೆ ನೈಋತ್ಯ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಈ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಮೂರು ಟ್ರಿಪ್‌ಗಳ ಸಂಚಾರ ನಡೆಸಲಿವೆ. ಜನವರಿ 13ರಿಂದ ರೈಲು ಸಂಚಾರ ಆರಂಭವಾಗಲಿದೆ. ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಮಯ ಹಾಗೂ ನಿಲುಗಡೆ ಮಾಹಿತಿ ಇಲ್ಲಿದೆ.

ಮೈಸೂರು-ಬೆಳಗಾವಿ ವಿಶೇಷ ರೈಲು (ಸಂಖ್ಯೆ 06285): ಜನವರಿ 13, 16 ಮತ್ತು 23ರಂದು ರಾತ್ರಿ 8:40ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಮೈಸೂರು ವಿಶೇಷ ರೈಲು (ಸಂಖ್ಯೆ 06286): ಜನವರಿ 15, 18 ಮತ್ತು 26ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 6:15ಕ್ಕೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎಸಿ 2-ಟೈರ್ ಕಮ್ ಎಸಿ 3-ಟೈರ್ (1), ಎಸಿ 3-ಟೈರ್ (3), ಸ್ಲೀಪರ್ ಕ್ಲಾಸ್ (13), ಸಾಮಾನ್ಯ ದ್ವಿತೀಯ ದರ್ಜೆ (4) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಇರಲಿವೆ. ಪ್ರಯಾಣಿಕರು ಈ ರೈಲಿನ ಅನುಕೂಲತೆ ಪಡೆಯಬೇಕೆಂದು ರೈಲ್ವೆ ಇಲಾಖೆ ಮನವಿ ಮಾಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ