LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ವಾರಕ್ಕೆ 5 ದಿನ ಕೆಲಸಕ್ಕಾಗಿ ಇಂದು ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ

Advertisement

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಎದುರಿಗೆ ಒತ್ತಾಯಿಸಿ ಜನವರಿ 27ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ಷೇರುಪೇಟೆ, ವಿದೇಶಿ ವಿನಿಮಯ ವ್ಯವಹಾರಗಳು ವಾರದಲ್ಲಿ ಐದು ದಿನ ನಡೆಯುತ್ತದೆ. ಹೀಗಾಗಿ ಬ್ಯಾಂಕ್ ಗಳಿಗೆ 5 ಕೆಲಸದ ದಿನಗಳು ಇರಬೇಕು ಎನ್ನುವ ಬೇಡಿಕೆ ಮೊದಲಿನಿಂದಲೂ ಇದೆ.

ಐದು ದಿನದ ಕೆಲಸ ದಿನಗಳನ್ನು ಜಾರಿಗೆ ತರುವುದಾಗಿ ಕೇಂದ್ರ ಸರ್ಕಾರ 2015ರಲ್ಲಿ ಭರವಸೆ ನೀಡಿದ್ದು, ಮೊದಲ ಹಂತದಲ್ಲಿ ಪ್ರತಿ ತಿಂಗಳ 2ನೇ, 4ನೇ ಶನಿವಾರ ರಜೆ ಎಂದು ಘೋಷಿಸಲಾಗಿತ್ತು.

ಉಳಿದ ಶನಿವಾರಗಳಂದು ಬ್ಯಾಂಕ್ ಗಳು ಕಾರ್ಯನಿರ್ವಹಿಸಬೇಕಿದೆ. ಹೀಗಾಗಿ ವಾರಕ್ಕೆ ಐದು ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗಿದೆ.

ಮುಷ್ಕರದ ಪರಿಣಾಮ:

ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್ ಸೇರಿದಂತೆ ಬ್ಯಾಂಕಿಂಗ್ ಸೇವೆಗಳು ಅಡಚಣೆಗೆ ಒಳಗಾಗಲಿವೆ.ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಉಂಟಾಗಬಹುದು.

ಯುಪಿಐ ಹಾಗೂ ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಮಾಧ್ಯಮಗಳ ಮೂಲಕ ಲಭ್ಯವಿರುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ