LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಶಿವರಾತ್ರಿ ದಿನದಂದೇ ದುಷ್ಕರ್ಮಿಗಳ ಅಟ್ಟಹಾಸ : ಶಿವಲಿಂಗ, ನಂದಿ ವಿಗ್ರಹಗಳ ಭಗ್ನ

Advertisement
ಗದಗ: ನಾಡಿನಾದ್ಯಂತ ಮಹಾಶಿವರಾತ್ರಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಕ್ತರು ಶಿವ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದ್ದಾರೆ.

ಶಿವರಾತ್ರಿ ದಿನದಂದೇ ಗದಗ ಜಿಲ್ಲೆಯ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು,ಶಿವಲಿಂಗ, ನಂದಿ ವಿಗ್ರಹಗಳನ್ನು ಭಗ್ನಗೊಳಿಸಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ರಾತ್ರಿ ಬೆಳಗಾಗುವಷ್ಟರಲ್ಲಿ ಗ್ರಾಮದ ಹೊರವಲಯದಲ್ಲಿರುವ ಶ್ರೀರಾಮಲಿಂಗೇಶ್ವರ ಹಾಗೂ ನಂದಿ ವಿಗ್ರಹವನ್ನು ಭಗ್ನಗೊಳಿಸಿದ್ದಾರೆ.

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಇಂದು ಭಕ್ತರು ಶಿವಲಿಂಗ, ನಂದಿ ವಿಗ್ರಹಕ್ಕೆ ಪೂಜೆಗೆಂದು ದೇವಸ್ಥಾನಕ್ಕೆ ಬಂದಿದ್ದ ವೇಳೆ ದೇವರ ವಿಗ್ರಹ, ಶಿವಲಿಂಗ ಭಗ್ನಗೊಂಡಿರುವುದು ಕಂಡು ಬೆಚ್ಚಿ ಬಿದ್ದಿದ್ದಾರೆ.

ಶಿವರಾತ್ರಿ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಗ್ರಾಮಸ್ಥರು ದೇವಸ್ಥಾನದಲ್ಲಿ ಸುಣ್ಣ, ಬಣ್ಣ ಹಚ್ಚಿ ದೇವಾಲಯವನ್ನು ಅಲಂಕರಿಸಿ ಹೋಗಿದ್ದು. ಇಂದು ಬೆಳಿಗ್ಗೆ ಪೂಜೆಗೆಂದು ದೇವಸ್ಥಾನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ರಾಮಲಿಂಗೇಶ್ವರ ಲಿಂಗದ ಪಾಣಿಬಟ್ಟಲು, ಎದುರಿನ ನಂದಿ ವಿಗ್ರಹದ ಮುಖ ಹಾಗೂ ದೇವಸ್ಥಾನದ ಹಿಂಭಾಗದಲ್ಲಿರುವ ಹೊನ್ನೆತ್ತಮ್ಮ ದೇವಿ ವಿಗ್ರಹವನ್ನೂ ವಿರೂಪಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮೊದಲು ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ