LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಕಾಲಕ್ಕೆ ಮಾಹಿತಿ ನೀಡದ ಪಿಡಿಒ, ಕಾರ್ಯದರ್ಶಿಗಳು : ತಲಾ 10,000 ರೂ.ಸಾವಿರ ದಂಡ

Advertisement
ಕೊಪ್ಪಳ : ಸಕಾಲಕ್ಕೆ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ ಒಬ್ಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಮೂವರು ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ಅವರು ತಲಾ 10,000 ರೂ.ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಮೇಲ್ಮನವಿದಾರರು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದೆ ಇರುವುದರಿಂದ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಸಲ್ಲಿಸಿದ ದ್ವೀತಿಯ ಮೇಲ್ಮವಿ ವಿಚಾರಣೆ ನಡೆಸಿದಾಗ ಮೇಲ್ಮನವಿದಾರರಿಗೆ ಮಾಹಿತಿ ನೀಡುವಂತೆ ಪ್ರತಿವಾದಿಗಳಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಕಾರ್ಯದರ್ಶಗಳಿಗೆ ಪೀಠ ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 18(3) ಎ,ಡಿ ರಡಿ ನಿರ್ದೇಶನ ನೀಡಿದೆ.

ತಪ್ಪಿದಲ್ಲಿ ಮಾಹಿತಿ ಹಕ್ಕು ಅಧಿನಿಯಮ 2005ರ ಕಲಂ 20(1) ರಡಿ ದಂಡದ ಎಚ್ಚರಿಕೆ ನೀಡಿದರೂ ಪೀಠದ ಆದೇಶ ಪಾಲನೆ ಮಾಡದ ಕಾರಣ ಪ್ರತಿವಾದಿ ಅಧಿಕಾರಿಗಳಾದ ವಡಗೇರಾ ತಾಲ್ಲೂಕಿನ ತಡಬಿಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಯಂಕನಗೌಡ, ಗುಂಡಗುರ್ತಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮಲ್ಲಿಕಾರ್ಜುನ ನಾಯಕ್, ಯಾದಗಿರಿ ತಾಲ್ಲೂಕಿನ ಸೈದಾಪೂರ ಗ್ರಾಮ ಪಂಚಾಯತ್ ಕಾರ್ಯದರ್ಶಿ ಇಸ್ಮಾಯಿಲ್ ಇವರಿಗೆ ಹಾಗೂ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ತಾಡರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ದೊಡ್ಡಮನಿ ಅವರಿಗೆ ತಲಾ 10,000 ರೂ. ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಮಾಡಲಾಗಿದೆ.

ಪ್ರಕರಣದಲ್ಲಿ ಸೈದಾಪೂರ ಗ್ರಾಮ ಪಂಚಾಯತ ಕಾರ್ಯದರ್ಶಿ ಇಸ್ಮಾಯಿಲ್ ಅವರಿಗೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲಾ 10,000 ರೂ. ಸೇರಿ 20,000 ರೂ. ದಂಡ ವಿಧಿಸಿದೆ ಹಾಗೂ ಮೇಲ್ಮನವಿದಾರಿಗೆ ಮಾಹಿತಿ ನೀಡಲು ಮಾಡಿದ ವಿಳಂಬಕ್ಕಾಗಿ ಮೇಲ್ಮನವಿದಾರರಿಗೆ 3000 ರೂ. ಸಾವಿರ ಪರಿಹಾರ ನೀಡುವಂತೆ ತಡಬಿಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಯಂಕನಗೌಡ ಇವರಿಗೆ ಆದೇಶ ಮಾಡಲಾಗಿದೆ.

ಒಟ್ಟು ಐದು ಪ್ರಕರಣಗಳಲ್ಲಿ ಪ್ರತಿವಾದಿಯವರಿಗೆ 50,000 ರೂ. ದಂಡ ವಿಧಿಸಿದ್ದು, ಸದರಿ ದಂಡ ಪಾವತಿ ಮಾಡಿ ಮುಂದಿನ ವಿಚಾರಣೆಗೆ ಹಾಜರಾಗಲು ಪುನಃ ಎಚ್ಚರಿಕೆ ನೀಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ