Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಬರಿಮಲೆಯ ಪ್ರಸಾದದಲ್ಲಿ ಕೀಟನಾಶಕ ಪತ್ತೆ : 5.5 ಕೋಟಿ ರೂ. ಮೌಲ್ಯದ ಪ್ರಸಾದ ಹಾಳು 

Advertisement
ತಿರುವನಂತಪುರ: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬ ಪತ್ತೆಯಾದ ಬಳಿಕ ಕೇರಳದ ಶಬರಿಮಲೆಯ ಪ್ರಸಾದದಲ್ಲಿ ಕೀಟನಾಶಕವಿರುವುದು ಪತ್ತೆಯಾಗಿದೆ. ಇದೀಗ ಶಬರಿಮಲೆಯ ಸುಮಾರು 5.5 ಕೋಟಿ ರೂ.ಯ ಅರವಣ ಪಾಯಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ಅರವಣ ಪಾಯಸದಲ್ಲಿ ಬಳಸಲಾಗಿರುವ ಏಲಕ್ಕಿಯಲ್ಲಿ ಅನುಮತಿಸಿರುವುದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕೀಟನಾಶಕ ಬಳಕೆ ಮಾಡಲಾಗಿದೆ ಎಂದು ದೂರು ಬಂದಿದೆ. ಈ ಹಿನ್ನೆಲೆ ಸುಮಾರು 6.65 ಲಕ್ಷ ಕಂಟೈನರ್‌ನಷ್ಟು ಅರವಣವನ್ನು ಬಳಕೆ ಮಾಡದೇ ಬಿಡಲಾಗಿದೆ.


ಅರವಣ ಸೇವನೆಗೆ ಯೋಗ್ಯವಾಗಿದ್ದರೂ ಸುಮಾರು 5.5 ಕೋಟಿ ರೂ. ಮೌಲ್ಯದ ದಾಸ್ತಾನನ್ನು ಗೊಬ್ಬರ ಮಾಡಲು ದೇವಸ್ಥಾನವನ್ನು ನಿರ್ವಹಣೆ ಮಾಡುವ ಟ್ರಾವಂಕೂರ್‌ ದೇವಸ್ವಂ ಬೋರ್ಡ್‌ ನಿರ್ಧರಿಸಿದೆ.


ಭಾರೀ ಪ್ರಮಾಣದ ಅರವಣವನ್ನು ವಿಲೇವಾರಿ ಮಾಡವುವುದು ಸವಾಲಾಗಿತ್ತು. ಇದನ್ನು ಕಾಡಿನಲ್ಲಿ ವಿಲೇವಾರಿ ಮಾಡಲು ವಿರೋಧ ವ್ಯಕ್ತವಾಗಿತ್ತು. ಭಕ್ತರ ಭಾವನೆಗೆ ಧಕ್ಕೆಯಾಗದಂತೆ ವಿಲೇವಾರಿ ಮಾಡಲು ಟಿಡಿಬಿ ಬಯಸಿದ್ದರಿಂದ ವೈಜ್ಞಾನಿಕ ವಿಲೇವಾರಿಗೆ ಟೆಂಡರ್‌ ಆಹ್ವಾನಿಸಿತ್ತು.


ಕೇರಳ ಮೂಲದ ಇಂಡಿಯನ್‌ ಸೆಂಟಿಫಿಗ್‌ ಎಂಜಿನಿಯರಿಂಗ್‌ ಸೆಲೂಷನ್ಸ್‌ ಸಂಸ್ಥೆ ಇದರ ಬಿಡ್‌ ಗೆದ್ದುಕೊಂಡು ಅರವಣವನ್ನು ಗೊಬ್ಬರ ಮಾಡುವ ಕೆಲಸವನ್ನು ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು