LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮದುವೆಯಾಗುವುದಾಗಿ ವಂಚನೆ : ಪ್ರಭು ಚವ್ಹಾಣ ಪುತ್ರನ ಮಹಿಳಾ ಆಯೋಗಕ್ಕೆ ದೂರು

Advertisement

ಬೀದರ್: ರಾಜ್ಯದ ಬಿಜೆಪಿಯ ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ಯುವತಿ ದೂರು ನೀಡಿದ್ದಾರೆ.


ಬಿಜೆಪಿ ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ಜೊತೆಗೆ 2 ವರ್ಷಗಳ ಹಿಂದೆ ಮದುವೆಗೆ ನಿಶ್ಚಿತಾರ್ಥ ನೆರವೇರಿತ್ತು.ಆ ಬಳಿಕ ಮದುವೆಯಾಗಲು ವಿಳಂಬ ಮಾಡಲಾಗಿತ್ತು.

ಎರಡು ಮನೆಯ ಕುಟುಂಬಸ್ಥರು ಒಪ್ಪಿ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ನಿಶ್ಚಿತಾರ್ಥ ನೆರವೇರಿಸಿದ್ದರು. ಈ ಬಳಿಕ ಪ್ರತೀಕ್ ಯುವತಿಯೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದರು ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

ನಿಶ್ಚಿತಾರ್ಥದ ಬಳಿಕ ದೈಹಿಕ ಸಂಪರ್ಕವನ್ನೂ ಬೆಳಸಿದಂತ ಮಾಜಿ ಸಚಿವ ಪ್ರಭು ಚವ್ಹಾಣ್ ಅವರ ಪುತ್ರ ಪ್ರತೀಕ್ ಚೌವ್ಹಾಣ್ ಮದುವೆಯಾಗಲು ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ತಮಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ಸ್ವೀಕರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದಾಗಿ ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ.

ತಾನು ಬೀದರ್ ಜಿಲ್ಲೆಯ ಹೊಕ್ರಾಣೆ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದರೂ, ಸ್ವೀಕರಿಸುತ್ತಿಲ್ಲ. ಹೀಗಾಗಿ ತನಗೆ ನ್ಯಾಯ ಕೊಡಿಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST