LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ :ಸಿದ್ದರಾಮಯ್ಯ 

Advertisement
ಯಾದಗಿರಿ : ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ನರೇಂದ್ರ ಮೋದಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ 'ಆರೋಗ್ಯ ಆವಿಷ್ಕಾರ' ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, 'ಸುಳ್ಳೇ ಬಿಜೆಪಿಯ ಮನೆ ದೇವರು.

ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371 ಜೆ ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವ್ ಹೋರಾಟಕ್ಕೆ ಮಾನ್ಯತೆ ನೀಡಿ 371ಜೆ ಜಾರಿ ಮಾಡಿದರು' ಎಂದರು.

'ನಾವು ಬಸವಣ್ಣನವರ ಆಶಯದಂತೆ ನುಡಿದಂತೆ ನಡೆಯುವರು. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ' ಎಂದರು.

'ಜಿಎಸ್​ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ' ಎಂದು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ