LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಣಶಿ ಗ್ರಾಮಸ್ಥರಿಂದ ರಸ್ತೆಗಾಗಿ ಪ್ರತಿಭಟನೆ ಎಚ್ಚರಿಕೆ

Advertisement
ಜೊಯಿಡಾ: ತಾಲೂಕಿನ ಅಣಶಿ ಸದಾಶಿವಗಡ ರಾಜ್ಯ ಹೆದ್ದಾರಿ ಸರಿಪಡಿಸುವುದು ಮತ್ತು ಗ್ರಾಮೀಣ ಭಾಗದಲ್ಲಿ ಅಳವಡಿಸಿದ ಬಿಎಸ್ಎನ್ಎಲ್ ಮೊಬೈಲ್ ಟವರ್ ಗಳಿಗೆ ಸಂಪರ್ಕ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಜನವರಿ 6 ರಂದು ಅಣಶಿ ಯಲ್ಲಿ ರಾಜ್ಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ಮಾಡುವುದಾಗಿ ಸ್ಥಳಿಯರು ತಹಶಿಲ್ದಾರ ಮೂಲಕ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ನುಜ್ಜಿಯಿಂದ ಬರಪಾಲಿ ತನಕ15 ಕಿ.ಮಿ ರಸ್ತೆ ಸಂಪೂರ್ಣ ಹೊಂಡಮಯವಾಗಿದೆ. ಶಾಲಾ ಮಕ್ಕಳು, ಜಿಲ್ಲಾ ಕೇಂದ್ರ ಕಾರವಾರಕ್ಕೆ ಹೋಗಲು ಮತ್ತು ಪ್ರವಾಸಿಗರಿಗೆ ತುಂಬಾ ತೊಂದರೆಯಾಗುತ್ತಿದೆ. ಗ್ರಾಮಿಣ ಭಾಗವಾದ ನುಜ್ಜಿ, ಬಾಡಪೋಲಿ, ಲಾಂಡೇ, ಶ್ರೀಪತಿ, ತೇರಾಳಿ, ಡಿಗ್ಗಿ ಹೀಗೆ ಅನೇಕ ಕಡೆ ಬಿಎಸ್ಎನ್ಎಲ್ ದಿಂದ ಟವರ್ ನಿರ್ಮಾಣ ಮಾಡಲಾಗಿದೆ. ಆದರೆ ಸಂಪರ್ಕ ವ್ಯವಸ್ಥೆ ಮಾಡಿಲ್ಲ, ಅಧಿಕಾರಿಗಳು ಸಬೂಬು ಹೇಳಿ ಕಾಲ ಕಳೆಯುತ್ತಿದ್ದಾರೆ.



ಜೊಯಿಡಾ ತಹಶಿಲ್ದಾರ ಮೂಲಕ ಅನೇಕ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಅಣಶಿ ಕೇಂದ್ರದಲ್ಲಿ ಜನವರಿ 6 ರಂದು ಔರಾದ್ ಸದಾಶಿವಗಡ ರಾಜ್ಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ಮಾಡುವುದಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ಮನವಿಯನ್ನು ಪ್ರಮುಖರಾದ ದೀಪಕ ದೇಸಾಯಿ, ಕಿರಣ ಹರಿಜನ, ಮುರಲಿಧರ ದೇಸಾಯಿ, ಧೀರಜ್ ದೇಸಾಯಿ, ವಿನಂತಿ ದೇವಳಿ, ವಿನೋದ್ ದೇವಳಿ, ವಿಶ್ವನಾಥ್ ಹರಿಜನ, ಗಿತಾಂಜಲಿ ದೇಸಾಯಿ, ನರಹರಿ ದೇಸಾಯಿ, ಶ್ರೀಕಾಂತ್ ಹರಿಜನ, ಸಂಗೀತಾ ದೇಸಾಯಿ ಮುಂತಾದವರು ಇದ್ದರು..
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ