LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಲ್ಲಗುಟ್ಟಪಲ್ಲಿಯಲ್ಲಿ ಶಾಸಕರ ನೇತೃತ್ವದ ಜನಸ್ಪಂದನ ಸಭೆ

Advertisement
ಚೇಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಏಪ್ರಿಲ್ 7ರಂದು 'ಜನಸ್ಪಂದನ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಚೇಳೂರು ತಾಲೂಕಿನ ನಲ್ಲಗುಟ್ಟಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ಚಾಲನೆ ಸಿಗಲಿದೆ.

ಕ್ಷೇತ್ರದಲ್ಲಿನ ಮೂಲಸೌಕರ್ಯ, ನಾಗರಿಕ ಸಮಸ್ಯೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಶಾಸಕರು ಸ್ವೀಕರಿಸಿ, ಸ್ಥಳದಲ್ಲೇ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ತಹಶೀಲ್ದಾರ್ ಶ್ವೇತಾ ಬಿ.ಕೆ. ಅವರು,ತಾಲೂಕಿನ ಎಲ್ಲಾ ಇಲಾಖಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅರ್ಜಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ವರದಿ :ಯಾರಬ್. ಎಂ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST