LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇನ್ನೊಂದು ವಾರ ಬೆಳಗಾವಿ ಅಧಿವೇಶನ ವಿಸ್ತರಿಸಿ: ಆರ್. ಅಶೋಕ್ 

Advertisement
ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆಯಾಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಆರ್‌.ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ.

ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರಿಗೆ ಇನ್ನೂ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ. ಪಡಿತರ ಚೀಟಿಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ.

ಕರ್ನಾಟಕದಾದ್ಯಂತ ಪಡಿತರ ಚೀಟಿಗಾಗಿ ಸಲ್ಲಿಸಿರುವ 3.22 ಲಕ್ಷಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ಅವುಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮತ್ತು ಬೆಂಗಳೂರಿನಿಂದ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ.

ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಆದ್ದರಿಂದ ಅಧಿವೇಶನವನ್ನು ಒಂದು ವಾರ ವಿಸ್ತರಿಸುವ ಬಗ್ಗೆ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ