Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಿ: ಕಾರ್ಯಕರ್ತ ಅಶೋಕ ಮಾದರ ದೀಡ ನಮಸ್ಕಾರ

ಕೃಷ್ಣಾ ನದಿಯಿಂದ ಬಬಲಾದಿ ಮಠದವರೆಗೆ ಉರುಳು ಸೇವೆ

Advertisement


ಕಲಾದಗಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಮಾಜಿ ಸಚಿವ, ಹಿರಿಯ ದಲಿತ ಮುಖಂಡ  ಆರ್.ಬಿ. ತಿಮ್ಮಾಪುರಗೆ ಉಪಮುಖ್ಯಮಂತ್ರಿ ಅಥವಾ ಪ್ರಮುಖ ಖಾತೆಯ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಅಶೋಕ ಮಾದರ ಅವರು ಆಗ್ರಹಿಸಿದ್ದಾರೆ.
ಅಶೋಕ ಮಾದರ ಅವರು,ಕೃಷ್ಣಾ ನದಿ ತೀರದಿಂದ ಬಬಲಾದಿಯ ಶ್ರೀ ಸದಾಶಿವ ಮುತ್ತ್ಯಾನ ಮಠದವರೆಗೆ ದೀಡ ನಮಸ್ಕಾರ ಹಾಕುವ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಕಾರ್ಯಕರ್ತ ಅಶೋಕ ಮಾದರ ಮಾತನಾಡಿ,ಆರ್.ಬಿ. ತಿಮ್ಮಾಪುರ ಅವರು 40 ವರ್ಷಗಳಿಂದ ಪಕ್ಷಕ್ಕೆ ದುಡಿದವರು. ಬಾಗಲಕೋಟೆ ಜಿಲ್ಲೆಯ ದಲಿತರ, ಹಿಂದುಳಿದವರ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಸಚಿವರಾಗಿ, ವಿಧಾನ ಪರಿಷತ ಸದಸ್ಯರಾಗಿ ರಾಜ್ಯಕ್ಕೆ ಸೇವೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಡಿ.ಕೆ. ಶಿವಕುಮಾರ  ಸಂಪುಟದಲ್ಲಿ ತಿಮ್ಮಾಪುರ ಸಾಹೇಬರಿಗೆ ಉಪಮುಖ್ಯಮಂತ್ರಿ ಸ್ಥಾನ ಅಥವಾ ಸಮಾಜ ಕಲ್ಯಾಣ, ಗೃಹ ಖಾತೆಯಂತಹ ಪ್ರಮುಖ ಸಚಿವ ಸ್ಥಾನ ನೀಡಬೇಕು. ಜಿಲ್ಲೆಗೆ ನ್ಯಾಯ ಸಿಗಬೇಕು" ಎಂದು ಆಗ್ರಹಿಸಿದರು. ತಿಮ್ಮಾಪುರಗೆ ಸಚಿವ ಸ್ಥಾನ ಸಿಗಲಿ ಎಂದು ಮುತ್ತ್ಯಾನ ಜಾತ್ರೆಯಲ್ಲಿ ಹರಕೆ ಹೊತ್ತಿದ್ದೆ. ಅದಕ್ಕಾಗಿ ಇಂದು ದೀಡ ನಮಸ್ಕಾರ ಹಾಕಿದ್ದೇನೆ ಎಂದು ಅವರು ತಿಳಿಸಿದರು.    

ವರದಿ : ಬಸವರಾಜ ಪೂಜಾರಿ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು