LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆರ್ ಬಿ ತಿಮ್ಮಾಪುರ ಅವರಿಗೆ ಮಂತ್ರಿ ಸ್ಥಾನ ನೀಡಬೇಕು : ಕೆಪಿಸಿಸಿ ಮಾಧ್ಯಮ ವಕ್ತಾರ ರಾವಸಾಬ ಐಹೊಳೆ

Advertisement

ಅಥಣಿ : ಉತ್ತರ ಕರ್ನಾಟಕದ ಪ್ರಭಾವಿ ಹಿರಿಯ ರಾಜಕಾರಣಿ, ದಲಿತ ಸಮುದಾಯದ ನಾಯಕ ಆರ್ ಬಿ ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ರಾಜ್ಯ ಮಾಧ್ಯಮ ವಕ್ತಾರ ರಾವಸಾಬ ಐಹೊಳೆ  ಹಾಗೂ ತಾಲೂಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯ  ಮುಖಂಡರು ಸಿಎಂ ಡಿ. ಕೆ ಶಿವಕುಮಾರ ಹಾಗೂ  ಪಕ್ಷದ ವರಿಷ್ಠರಿಗೆ ಒತ್ತಾಯ ಮಾಡಿದ್ದಾರೆ.
ಅವರು ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ಆರ್ ಬಿ ತಿಮ್ಮಾಪುರ ಅವರು  ಉತ್ತರ ಕರ್ನಾಟಕದ ಹಿರಿಯ ಶಾಸಕರಾಗಿ  ಅನೇಕ ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇದಲ್ಲದೆ ಇತ್ತೀಚಿಗೆ ಬಾಗಲಕೋಟೆಯ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಅವರ ಗೆಲುವಿನಲ್ಲಿ  ಪ್ರಮುಖ ಪಾತ್ರ ವಹಿಸಿದ್ದರು.  ತಿಮ್ಮಾಪುರ ಅವರು ತಮ್ಮ ರಾಜಕೀಯ ಬದುಕಿನುದ್ದಕ್ಕೂ ಕಾಂಗ್ರೆಸ್‌ನ ತತ್ವ ಸಿದ್ದಾಂತಗಳನ್ನು ಅನುಸರಿಸಿಕೊಂಡು ಬಂದಿದ್ದಾರೆ. ಪಕ್ಷ ಸಂಘಟನೆಗೆ ನಿರಂತರ ಶ್ರಮಿಸಿದ್ದಾರೆ. ಪಕ್ಷ ಇವರ ಶ್ರಮವನ್ನು ಪರಿಗಣಿಸಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಪ್ರಮುಖ ಖಾತೆಯ ಸಚಿವ ಸ್ಥಾನ  ನೀಡಬೇಕು  ಎಂದು ಆಗ್ರಹಿಸಿದ್ದಾರೆ.  

news_1781017853_0_348.webp

 

ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ನಿರ್ದೇಶಕಿ  ಹಾಗೂ ಎಐಸಿಸಿ ಸಂಯೋಜಕಿ ಸುನಿತಾ ಐಹೊಳೆ ಮಾತನಾಡಿ ಉತ್ತರ ಕರ್ನಾಟಕದ ದಲಿತ ಸಮುದಾಯದ ಹಿರಿಯ ನಾಯಕರಾಗಿರುವ ಆರ್ ಬಿ ತಿಮ್ಮಾಪುರ ನಾಲ್ಕೈದು ಬಾರಿ ಸಚಿವರಾಗಿ  ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕೊಡುಗೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ಮತ್ತು ಕೇಂದ್ರ ವರಿಷ್ಠರು ಆರ್ ಬಿ ತಿಮ್ಮಪೂರ್ ಅವರಿಗೆ  ಮಂತ್ರಿ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿದರು. 
ಈ ಸಂದರ್ಭದಲ್ಲಿ ಅಥಣಿ ತಾಲೂಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ  ಹನುಮಂತ ಅರ್ದಾಯೂರ, ಸಮಾಜದ ಮುಖಂಡರಾದ  ಕುಮಾರ ಗಸ್ತಿ, ಸಂತೋಷ್ ಹಾದಿಮನಿ, ಸದಾಶಿವ ದೊಡ್ಡಮನಿ, ಸುದೀಪ್ ಐಹೊಳೆ, ಸತೀಶ್ ಕುಲ್ಲೊಳ್ಳಿ, ಪ್ರಶಾಂತ್ ಆಚಾರಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ