Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈಕಾಲು ಹಿಡಿದ ಇತಿಹಾಸ ಆರ್‌ಎಸ್‌ಎಸ್‌ಗೆ ಇದೆ : ಪ್ರಿಯಾಂಕ್ ಖರ್ಗೆ 

Advertisement

ಬೆಂಗಳೂರು: ದೇಶದಲ್ಲಿ ಪ್ರತಿಯೊಬ್ಬ ನಾಗರಿಕ ಹಾಗೂ ಸಂಸ್ಥೆಗಳು ಕಾನೂನಿಗೆ ಬದ್ಧರಾಗಿರಬೇಕು.

ಆದರೆ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಮಾತ್ರ ತೆರಿಗೆ ಮತ್ತು ನೋಂದಣಿ ನಿಯಮಗಳಿಂದ ವಿನಾಯಿತಿ ಬೇಕಿರುವುದೇಕೆ ಎಂದು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಆರ್‌ಎಸ್‌ಎಸ್ ನೋಂದಣಿ ವಿಚಾರವಾಗಿ ಬಿಜೆಪಿ ನಾಯಕ ಸಿ.ಟಿ. ರವಿ ಮಾಡಿದ್ದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು, ಸಿ.ಟಿ. ರವಿಯವರಿಗೆ ತಮ್ಮದೇ ಸಂಘಟನೆಯ ಇತಿಹಾಸದ ಜ್ಞಾನವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕೈಕಾಲು ಹಿಡಿದ ಇತಿಹಾಸ ಆರ್‌ಎಸ್‌ಎಸ್‌ಗೆ ಇದೆ

ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಜವಾಹರಲಾಲ್ ನೆಹರೂ ಅವರು ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸಿದಾಗ, ನಿಷೇಧ ಹಿಂಪಡೆಯುವಂತೆ ಕೋರಿ ಇದೇ ಆರ್‌ಎಸ್‌ಎಸ್ ನಾಯಕರು ಅವರ ಕೈಕಾಲು ಹಿಡಿದಿದ್ದರು ಎಂದು ವಾಗ್ದಾಳಿ ನಡೆಸಿದರು. 

ಇಂದಿರಾಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ ಸಂದರ್ಭದಲ್ಲೂ ಆರ್‌ಎಸ್‌ಎಸ್‌ನ ಅಂದಿನ ಸಂಚಾಲಕರೇ ಪತ್ರ ಬರೆದು ಕ್ಷಮೆಯಾಚಿಸಿದ್ದರು. 

ಬ್ರಿಟಿಷರ ಕಾಲದಲ್ಲಿ ವೀರ ಸಾವರ್ಕರ್ ಅವರು ಬ್ರಿಟಿಷರಿಂದ ತಿಂಗಳಿಗೆ 60 ರೂಪಾಯಿ ಪಿಂಚಣಿ ಪಡೆಯುತ್ತಾ, ಅವರ ಬಳಿ ಹೇಗೆ ಕೈಕಾಲು ಬಿದ್ದಿದ್ದರು ಎಂಬುದು ಅವರೇ ಬರೆದಿರುವ ಇತಿಹಾಸದಲ್ಲಿ ದಾಖಲಾಗಿದೆ ಎಂದು ಖರ್ಗೆ ನೆನಪಿಸಿದರು.

ಸಂವಿಧಾನಕ್ಕೆ ಒಳಪಡುವುದಿಲ್ಲ ಎಂದು ಕೇಶವಕೃಪಾದವರು ಹೇಳಲಿ!

"ಸಂಘಟನೆಯನ್ನು ಕಾನೂನುಬದ್ಧವಾಗಿ ನೋಂದಣಿ ಮಾಡಿಕೊಳ್ಳಿ ಎಂದರೆ ಇವರಿಗೇಕೆ ಅಷ್ಟೊಂದು ಭಯ?" ಎಂದು ಸಚಿವರು ಪ್ರಶ್ನಿಸಿದರು.

ಭಾರತದ ಸಂವಿಧಾನ ಮತ್ತು ಕಾನೂನಿಗೆ ಆರ್‌ಎಸ್‌ಎಸ್ ಒಳಪಡುವುದಿಲ್ಲ ಎನ್ನುವುದಾದರೆ ಅದನ್ನು ಬಹಿರಂಗವಾಗಿ ಘೋಷಿಸಲಿ. ನಾನೇ ಖುದ್ದಾಗಿ ಅವರ ಕಚೇರಿಯಾದ 'ಕೇಶವಕೃಪಾ'ಕ್ಕೆ ಹೋಗಲು ಸಿದ್ಧನಿದ್ದೇನೆ, ಇಲ್ಲವೇ ಅವರೇ ನನ್ನ ಕಚೇರಿಗೆ ಬಂದು ಕಾನೂನಿನಿಂದ ತಮಗೆ ವಿನಾಯಿತಿ ಇದೆ ಎಂಬುದನ್ನು ಸಾಬೀತುಪಡಿಸಲಿ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.

ಎಲ್ಲರಿಗೂ ಇರುವ ಕಾನೂನು ಆರ್‌ಎಸ್‌ಎಸ್‌ಗೆ ಏಕೆ ಅನ್ವಯಿಸಲ್ಲ?

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬೀದಿ ಬದಿಯ ವ್ಯಾಪಾರಿಯಿಂದ ಹಿಡಿದು ದೇವಸ್ಥಾನಗಳವರೆಗೆ ಪ್ರತಿಯೊಂದೂ ನೋಂದಣಿಯಾಗಬೇಕು.

 ದೇವಸ್ಥಾನಗಳ ಆದಾಯಕ್ಕೂ ಲೆಕ್ಕ ಕೊಡಬೇಕು, ಸಾಮಾನ್ಯ ಜನರು ಆದಾಯ ತೆರಿಗೆ ಇಲಾಖೆಗೆ (IT) ಲೆಕ್ಕ ಒಪ್ಪಿಸಬೇಕು. ಹೀಗಿರುವಾಗ ಆರ್‌ಎಸ್‌ಎಸ್ ಮಾತ್ರ ತಮಗೆ ಬರುವ ಕೋಟ್ಯಂತರ ರೂಪಾಯಿ ದೇಣಿಗೆಗೆ ಯಾವುದೇ ಲೆಕ್ಕ ಕೊಡುವುದಿಲ್ಲ ಎಂದರೆ ಹೇಗೆ? ಇವರು ಮಾತ್ರ ದೇಶದ ಕಾನೂನಿಗಿಂತ ಮೇಲಿದ್ದಾರೆಯೇ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಯೊಂದು ಸಂಸ್ಥೆಯೂ ಪಾರದರ್ಶಕವಾಗಿ ಲೆಕ್ಕ ನೀಡಲೇಬೇಕು ಎಂದು ಅವರು ಒತ್ತಾಯಿಸಿದರು.

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್