LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಂದಿಹಳ್ಳಿಯಲ್ಲಿ ಮರಳು ಮಾಫಿಯಾದ ನಗ್ನ ನರ್ತನ: ಜಿಲ್ಲಾಡಳಿತಕ್ಕೆ ಕುರುಡುತನವೇ?

Advertisement

ಬೆಳಗಾವಿ: ಜಿಲ್ಲೆಯ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನೈಸರ್ಗಿಕ ಸಂಪನ್ಮೂಲಗಳ ಲೂಟಿ ಮಿತಿಮೀರಿದ್ದು, ಮರಳು ಮಾಫಿಯಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಅಧಿಕಾರಿಗಳ ಕಣ್ಮುಂದೆಯೇ ಹಗಲು-ರಾತ್ರಿ ಎನ್ನದೆ ಭೂಮಿಯ ಒಡಲನ್ನು ಬಗೆಯಲಾಗುತ್ತಿದ್ದರೂ, ಜಿಲ್ಲಾಡಳಿತ ಮಾತ್ರ ಕುಂಭಕರ್ಣನ ನಿದ್ದೆಗೆ ಜಾರಿದಂತಿದೆ.

ಹೈಟೆಕ್ ಯಂತ್ರಗಳ ಬಳಸಿ ಲೂಟಿ
​ನಂದಿಹಳ್ಳಿಯ ಹಳ್ಳ-ಕೊಳ್ಳಗಳಲ್ಲಿ ಮರಳು ಕಳ್ಳತನ ಮಾಡಲು ಮಾಫಿಯಾ ಹೈಟೆಕ್ ದಾರಿಗಳನ್ನು ಕಂಡುಕೊಂಡಿದೆ. ಬೃಹತ್ ಪಂಪ್‌ಸೆಟ್‌ಗಳನ್ನು ಬಳಸಿ ನೀರನ್ನು ಹೊರಹಾಕಲಾಗುತ್ತಿದೆ. ತದನಂತರ ಜೆಸಿಬಿ ಹಾಗೂ ಹಿಟಾಚಿ ಯಂತ್ರಗಳ ಮೂಲಕ ಭೂಮಿಯನ್ನು ಆಳವಾಗಿ ಅಗೆದು ಟ್ರ್ಯಾಕ್ಟರ್ ಮತ್ತು ಲಾರಿಗಳಿಗೆ ಮರಳು ತುಂಬಿಸಲಾಗುತ್ತಿದೆ. ಈ ಭೀಕರ ದೃಶ್ಯಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕೃತಿಯ ನಾಶ ಕಣ್ಣೆದುರೇ ನಡೆಯುತ್ತಿದ್ದರೂ ಯಾರೂ ಪ್ರಶ್ನಿಸದಂತಾಗಿದೆ.

ಅಧಿಕಾರಿಗಳ ಮೌನವೇ ಆಶೀರ್ವಾದ?
​ಇಷ್ಟೆಲ್ಲಾ ಬಹಿರಂಗವಾಗಿ ನಡೆಯುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯಾಗಲಿ ಅಥವಾ ಸ್ಥಳೀಯ ಪೊಲೀಸರಾಗಲಿ ಇತ್ತ ಸುಳಿಯದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
​"ಬಡವ ತನ್ನ ಮನೆ ಕಟ್ಟಲು ಒಂದು ಚೀಲ ಮರಳು ತರಬೇಕೆಂದರೆ ಕಾನೂನು ಪಾಲಿಸುವಂತೆ ತಾಕೀತು ಮಾಡುವ ಅಧಿಕಾರಿಗಳು, ಸಾವಿರಾರು ಟನ್ ಮರಳು ಲೂಟಿ ಮಾಡುತ್ತಿರುವ ಮಾಫಿಯಾದವರ ಮುಂದೆ ಮೌನ ವಹಿಸಿರುವುದೇಕೆ?" ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.

​ಈ ಅಕ್ರಮ ದಂಧೆಯ ಹಿಂದೆ ಪ್ರಭಾವಿ ರಾಜಕಾರಣಿಗಳ ಅಥವಾ ಅಧಿಕಾರಿಗಳ ಹಸ್ತವಿದೆಯೇ ಎಂಬ ಶಂಕೆ ಬಲವಾಗಿ ವ್ಯಕ್ತವಾಗುತ್ತಿದೆ. ಅಧಿಕಾರಿಗಳ ಈ ನಿಗೂಢ ಮೌನವೇ ಲೂಟಿಕೋರರಿಗೆ 'ರಕ್ಷಾ ಕವಚ'ವಾಗಿ ಪರಿಣಮಿಸಿದೆಯೇ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
​ರೈತರ ಭೂಮಿ ಬರಡಾಗುವ ಭೀತಿ ಮರಳು ಲೂಟಿಯಿಂದಾಗಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ನಂದಿಹಳ್ಳಿಯ ಫಲವತ್ತಾದ ರೈತರ ಭೂಮಿ ಬರಡಾಗುವ ಸಂಶಯವಿದೆ. ಪರಿಸರ ಸಮತೋಲನ ತಪ್ಪುತ್ತಿದ್ದು, ಮಳೆಗಾಲದಲ್ಲಿ ಕೃತಕ ಪ್ರವಾಹ ಉಂಟಾಗುವ ಭೀತಿಯೂ ಎದುರಾಗಿದೆ.
​ಜಿಲ್ಲಾಧಿಕಾರಿಗಳ ಗಮನಕ್ಕೆ...
​ಜಿಲ್ಲಾಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಅಕ್ರಮ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಈ ದಂಧೆಯಲ್ಲಿ ಶಾಮೀಲಾಗಿರುವ ಅಧಿಕಾರಿಗಳಿಗೆ 'ಚಳಿ' ಬಿಡಿಸಬೇಕಿದೆ ಮತ್ತು ಮರಳು ಲೂಟಿಕೋರರನ್ನು ಜೈಲಿಗಟ್ಟಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ವರದಿ :ಸದಾಶಿವಾಮಹಾಂತೇಶ್ ಎಸ್ ಹುಲಿಕಟ್ಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ