Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದಿಹಳ್ಳಿಯಲ್ಲಿ ಮರಳು ಮಾಫಿಯಾದ ನಗ್ನ ನರ್ತನ: ಜಿಲ್ಲಾಡಳಿತಕ್ಕೆ ಕುರುಡುತನವೇ?

Advertisement

ಬೆಳಗಾವಿ: ಜಿಲ್ಲೆಯ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನೈಸರ್ಗಿಕ ಸಂಪನ್ಮೂಲಗಳ ಲೂಟಿ ಮಿತಿಮೀರಿದ್ದು, ಮರಳು ಮಾಫಿಯಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಅಧಿಕಾರಿಗಳ ಕಣ್ಮುಂದೆಯೇ ಹಗಲು-ರಾತ್ರಿ ಎನ್ನದೆ ಭೂಮಿಯ ಒಡಲನ್ನು ಬಗೆಯಲಾಗುತ್ತಿದ್ದರೂ, ಜಿಲ್ಲಾಡಳಿತ ಮಾತ್ರ ಕುಂಭಕರ್ಣನ ನಿದ್ದೆಗೆ ಜಾರಿದಂತಿದೆ.

ಹೈಟೆಕ್ ಯಂತ್ರಗಳ ಬಳಸಿ ಲೂಟಿ
​ನಂದಿಹಳ್ಳಿಯ ಹಳ್ಳ-ಕೊಳ್ಳಗಳಲ್ಲಿ ಮರಳು ಕಳ್ಳತನ ಮಾಡಲು ಮಾಫಿಯಾ ಹೈಟೆಕ್ ದಾರಿಗಳನ್ನು ಕಂಡುಕೊಂಡಿದೆ. ಬೃಹತ್ ಪಂಪ್‌ಸೆಟ್‌ಗಳನ್ನು ಬಳಸಿ ನೀರನ್ನು ಹೊರಹಾಕಲಾಗುತ್ತಿದೆ. ತದನಂತರ ಜೆಸಿಬಿ ಹಾಗೂ ಹಿಟಾಚಿ ಯಂತ್ರಗಳ ಮೂಲಕ ಭೂಮಿಯನ್ನು ಆಳವಾಗಿ ಅಗೆದು ಟ್ರ್ಯಾಕ್ಟರ್ ಮತ್ತು ಲಾರಿಗಳಿಗೆ ಮರಳು ತುಂಬಿಸಲಾಗುತ್ತಿದೆ. ಈ ಭೀಕರ ದೃಶ್ಯಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕೃತಿಯ ನಾಶ ಕಣ್ಣೆದುರೇ ನಡೆಯುತ್ತಿದ್ದರೂ ಯಾರೂ ಪ್ರಶ್ನಿಸದಂತಾಗಿದೆ.

ಅಧಿಕಾರಿಗಳ ಮೌನವೇ ಆಶೀರ್ವಾದ?
​ಇಷ್ಟೆಲ್ಲಾ ಬಹಿರಂಗವಾಗಿ ನಡೆಯುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯಾಗಲಿ ಅಥವಾ ಸ್ಥಳೀಯ ಪೊಲೀಸರಾಗಲಿ ಇತ್ತ ಸುಳಿಯದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
​"ಬಡವ ತನ್ನ ಮನೆ ಕಟ್ಟಲು ಒಂದು ಚೀಲ ಮರಳು ತರಬೇಕೆಂದರೆ ಕಾನೂನು ಪಾಲಿಸುವಂತೆ ತಾಕೀತು ಮಾಡುವ ಅಧಿಕಾರಿಗಳು, ಸಾವಿರಾರು ಟನ್ ಮರಳು ಲೂಟಿ ಮಾಡುತ್ತಿರುವ ಮಾಫಿಯಾದವರ ಮುಂದೆ ಮೌನ ವಹಿಸಿರುವುದೇಕೆ?" ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.

​ಈ ಅಕ್ರಮ ದಂಧೆಯ ಹಿಂದೆ ಪ್ರಭಾವಿ ರಾಜಕಾರಣಿಗಳ ಅಥವಾ ಅಧಿಕಾರಿಗಳ ಹಸ್ತವಿದೆಯೇ ಎಂಬ ಶಂಕೆ ಬಲವಾಗಿ ವ್ಯಕ್ತವಾಗುತ್ತಿದೆ. ಅಧಿಕಾರಿಗಳ ಈ ನಿಗೂಢ ಮೌನವೇ ಲೂಟಿಕೋರರಿಗೆ 'ರಕ್ಷಾ ಕವಚ'ವಾಗಿ ಪರಿಣಮಿಸಿದೆಯೇ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
​ರೈತರ ಭೂಮಿ ಬರಡಾಗುವ ಭೀತಿ ಮರಳು ಲೂಟಿಯಿಂದಾಗಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ನಂದಿಹಳ್ಳಿಯ ಫಲವತ್ತಾದ ರೈತರ ಭೂಮಿ ಬರಡಾಗುವ ಸಂಶಯವಿದೆ. ಪರಿಸರ ಸಮತೋಲನ ತಪ್ಪುತ್ತಿದ್ದು, ಮಳೆಗಾಲದಲ್ಲಿ ಕೃತಕ ಪ್ರವಾಹ ಉಂಟಾಗುವ ಭೀತಿಯೂ ಎದುರಾಗಿದೆ.
​ಜಿಲ್ಲಾಧಿಕಾರಿಗಳ ಗಮನಕ್ಕೆ...
​ಜಿಲ್ಲಾಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಅಕ್ರಮ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಈ ದಂಧೆಯಲ್ಲಿ ಶಾಮೀಲಾಗಿರುವ ಅಧಿಕಾರಿಗಳಿಗೆ 'ಚಳಿ' ಬಿಡಿಸಬೇಕಿದೆ ಮತ್ತು ಮರಳು ಲೂಟಿಕೋರರನ್ನು ಜೈಲಿಗಟ್ಟಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ವರದಿ :ಸದಾಶಿವಾಮಹಾಂತೇಶ್ ಎಸ್ ಹುಲಿಕಟ್ಟಿ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್