LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸುತ್ತಾರೆ: ಸತೀಶ್ ಜಾರಕಿಹೊಳಿ

Advertisement
ಬೆಂಗಳೂರು : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆ ನಡೆದಿದ್ದು, ಸಚಿವ ಸ್ಥಾನಕ್ಕೆ ರಾಜಣ್ಣ ಅವರು ರಾಜೀನಾಮೆ ನೀಡಿದ್ದಾರೆ.

ಈ ವಿಚಾರವಾಗಿ ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸುತ್ತಾರೆ. ನಾವು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ರಾಜಕೀಯದ ಪಾಠ ಹೇಳಿದ್ದಾರೆ.

ರಾಜಣ್ಣರನ್ನ ಸಂಪುಟದಿಂದ ವಜಾ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜಣ್ಣರನ್ನ ವಜಾ ಮಾಡಿರುವುದು ಹೈಕಮಾಂಡ್‌ನ ನಿರ್ಧಾರ. ಅದರ ಬಗ್ಗೆ ರಾಜಣ್ಣ ಅವರೇ ಹೇಳಿದ್ದಾರೆ.

ದೆಹಲಿಗೆ ಹೋಗೋದಾಗಿ ಅವರೇ ಹೇಳಿದ್ದಾರೆ. ಆಮೇಲೆ ಪಿತೂರಿ ಅಂತ ಹೇಳಿದ್ದಾರೆ. ಹೈಕಮಾಂಡ್ ಹತ್ರ ಹೋಗಿ ಅವರು ಮಾತಾಡ್ತಾರೆ. ವಜಾದ ಬಗ್ಗೆ ವ್ಯಾಖ್ಯಾನ ಮಾಡೋಕೆ ಹೋಗಲ್ಲ ಎಂದಿದ್ದಾರೆ.

ಇದನ್ನ ಸಮುದಾಯಕ್ಕೆ ಮಾಡಿದ ಮೋಸ ಅಂತ ಹೇಳಲಾಗೊಲ್ಲ. ಏನು ಅಂತ ರಾಜಣ್ಣ ಮುಂದೆ ಹೇಳ್ತೀನಿ ಅಂದಿದ್ದಾರೆ. ಮುಂದೆ ನೋಡೊಣ.ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಹಗೆ ಇರುತ್ತದೆ.

ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ದೆಹಲಿಗೆ ರಾಜಣ್ಣ ಹೋಗ್ತೀನಿ ಅಂತ ಹೇಳಿದ್ದಾರೆ. ಆಗ ಎಲ್ಲವೂ ಸರಿ ಹೋಗಬಹುದು ಎಂದು ತಿಳಿಸಿದ್ದಾರೆ.

ಇದು ನಮ್ಮ ಪಕ್ಷದ ನಿರ್ಧಾರ ವಿಪಕ್ಷಗಳು ಯಾಕೆ ಮಾತಾಡ್ತಾರೆ. ಸಿಎಂ ಅವರು ಸ್ಪಷ್ಟನೆ ಕೊಡ್ತಾರೆ. ದೆಹಲಿಗೆ ಹೋದ ಮೇಲೆ ಎಲ್ಲವೂ ತಿಳಿಯಾಗಬಹುದು.

ರಾಜಕೀಯದಲ್ಲಿ ಹುಷಾರಾಗಿ ಇರಬೇಕು. ಇಲ್ಲದೆ ಹೋದ್ರೆ ಹೀಗೆ ಆಗುತ್ತದೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಹಗೆ ಇರೋದು ಸಾಮಾನ್ಯ ಎಂದು ಹೇಳಿದ್ದಾರೆ.

ರಾಜಕೀಯದಲ್ಲಿ ಇದೆಲ್ಲವೂ ಇರುತ್ತದೆ. ನಾವು ಎಚ್ಚರಿಕೆಯಿಂದ ಇರಬೇಕು. ಇಲ್ಲದೇ ಹೋದ್ರೆ ಹೀಗೆ ಆಗುತ್ತದೆ. ಹೈಕಮಾಂಡ್ ಅನ್ನು ಮನವೊಲಿಸುವ ಪ್ರಯತ್ನವನ್ನು ಮುಂದೆ ರಾಜಣ್ಣ ಮಾಡ್ತಾರೆ. ಆಗ ಸರಿ ಹೋಗಬಹುದು ಎಂದಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ