LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಧರ್ಮಸ್ಥಳ ಯಾತ್ರೆಗೆ ಬಿಜೆಪಿಗೆ ವಿದೇಶದಿಂದ ಹಣ ಬಂದಿದೆ: ಸಿದ್ದರಾಮಯ್ಯ ಆರೋಪ 

Advertisement
ಮೈಸೂರು : ಬಿಜೆಪಿ ನಾಯಕರಿಂದ ಧರ್ಮಸ್ಥಳ ಯಾತ್ರೆ ವಿಚಾರವಾಗಿ ಬಿಜೆಪಿ ಅವರು ಮೊದಲೇ ಏಕೆ ಧರ್ಮಸ್ಥಳ ಯಾತ್ರೆ ಮಾಡಲಿಲ್ಲ? ವೀರೇಂದ್ರ ಹೆಗಡೆಯವರೇ ಎಸ್‌ಐಟಿ ತನಿಖೆಯನ್ನು ಸ್ವಾಗತ ಮಾಡಿದ್ದಾರೆ. ಸತ್ಯ ಹೊರಗೆ ಬರಬೇಕು ಅಂತ ವೀರೇಂದ್ರ ಹೆಗ್ಗಡೆ ಅವರೇ ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ ಇಷ್ಟೆಲ್ಲ ಮಾಡಬೇಕಾದರೆ ದುಡ್ಡು ಎಲ್ಲಿಂದ ಬಂದಿದೆ? ಹೋರಾಟ ಮಾಡಲು ಬಿಜೆಪಿ ಅವರಿಗೆ ಹೊರದೇಶದಿಂದ ದುಡ್ಡು ಬಂದಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದರು.

ಸೌಜನ್ಯ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವ ವಿಚಾರವಾಗಿ ಸಿಬಿಐ ಯಾರ ಕೈ ಕೆಳಗೆ ಇದೆ? ಸುಪ್ರೀಂ ಕೋರ್ಟ್ ಮೊರೆ ಹೋಗುವುದು ಸೌಜನ್ಯ ಕುಟುಂಬಕ್ಕೆ ಬಿಟ್ಟಿದ್ದು. ಒಂದು ಕಡೆ ಬಿಜೆಪಿಯವರು ವೀರೇಂದ್ರ ಹೆಗ್ಗಡೆಗೆ ಜೈಕಾರ ಅಂತಾರೆ.

ಮತ್ತೊಂದು ಕಡೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ವಿಪಕ್ಷದವರು ಹೇಳುವ ವಿಚಾರ ಎಲ್ಲವೂ ಸತ್ಯನ ಅಸೆಂಬ್ಲಿಯಲ್ಲಿ ಆರ್ ಅಶೋಕ್, ಸುನಿಲ್ ಕುಮಾರ್ ಇಬ್ಬರು ಚರ್ಚೆ ಮಾಡಿದರು.

ಸೌಜನ್ಯ ಪ್ರಕರಣದ ಬಗ್ಗೆ ಮಹಿಳೆಯರು ಹೇಳಿಕೆ ವಿಚಾರವಾಗಿ ಆ ಮಹಿಳೆ ಕೋರ್ಟ್ ಹಾಗೂ ಸಿಬಿಐ ಮುಂದೆ ಏಕೆ ಹೇಳಲಿಲ್ಲ? ಸಾಕ್ಷಿ ಗೊತ್ತಿದ್ದು ಮುಚ್ಚಿಡುವುದು ಅಪರಾಧ ಈ ವಿಚಾರ ಗೊತ್ತಿಲ್ಲ. ಅದು ಸೌಜನ್ಯ ಕುಟುಂಬಕ್ಕೆ ಬಿಟ್ಟ ವಿಚಾರ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಬಿಜೆಪಿ ನಾಯಕರಿಂದ ಚಾಮುಂಡಿ ಬೆಟ್ಟ ಚಲೋ ವಿಚಾರವಾಗಿ ಮಾತನಾಡಿದ ಅವರು ಮಾಡಲಿ ಬಿಡಿ ನಾನು ಏನು ಬೇಡ ಎನ್ನಲ್ಲ ಮಿರ್ಜಾ ಇಸ್ಮಾಯಿಲ್ ಮಹಾರಾಜರ ಜೊತೆ ಅಂಬಾರಿ ಮೇಲೆ ಹೋಗಿದ್ದರು.

ಆಗ ಬಿಜೆಪಿಯವರು ಎಲ್ಲಿಗೆ ಹೋಗಿದ್ದರು? ಈ ಹಿಂದೆ ನಿಸಾರ್ ಅಹಮದ್ ಉದ್ಘಾಟನೆ ಮಾಡಿದ್ದರು ಆಗ ಬಿಜೆಪಿಯವರು ಎಲ್ಲಿ ಹೋಗಿದ್ದರು? ಬಾನು ಮುಷ್ತಾಕ್ ಕನ್ನಡದ ಸಾಹಿತಿ.

ಅರಿಶಿಣ ಕುಂಕುಮ ಬಗ್ಗೆ ಮಾತನಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಕನ್ನಡದ ಮೇಲೆ ಪ್ರೀತಿ ಆಸಕ್ತಿ ಇಲ್ಲದೆ ಬರೆಯಲು ಸಾಧ್ಯನಾ? ಬೇರೆ ಧರ್ಮದವರು ಅರಿಶಿಣ ಕುಂಕುಮ ಹಾಕಿಕೊಳ್ಳಿ ಅಂದರೆ ಹೇಗೆ? ಅರಿಶಿನ ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿ ಇದೆಯ? ನೀವು ಹಿಂದೂಗಳಾಗಿ ಅಂದರೆ ಹೇಗೆ ಬಾನು ಮುಷ್ತಾಕ್ ವಿರುದ್ಧ ಯಾವುದೇ ಫತ್ವ ಹೊರಡಿಸಿಲ್ಲ ಈ ಬಗ್ಗೆ ಧರ್ಮ ಗುರುಗಳೆ ಸ್ಪಷ್ಟನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ