LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಚಿವ ಸಂಪುಟ ಪುನಾರಚನೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ : ಸಿದ್ದರಾಮಯ್ಯ 

Advertisement
ನವದೆಹಲಿ : ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ಹಲವು ವಿಷಯಗಳು ಕುರಿತು ಚರ್ಚೆ ನಡೆಸಿದ್ದಾರೆ.

ಆರ್‌ಸಿಬಿ ಅಭಿಮಾನಿಗಳ ಸಾವು, ಸದಾ ಈ ಜಾತಿಗಣತಿ ಸಮೀಕ್ಷೆ ನಡೆಸುವ ಬಗ್ಗೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಇನ್ನು ಸಚಿವ ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವರಿಷ್ಠರನ್ನು ಭೇಟಿಯಾದ ವೇಳೆ ಸಚಿವ ಸಂಪುಟ ಪುನಾರಚನೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಯಾವುದೇ ರೀತಿಯಾದ ಚರ್ಚೆ ಸಭೆಯಲ್ಲಿ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರಿಷ್ಠರ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಇನ್ನು ಬೆಂಗಳೂರಿನ ಕಾಲ್ತುಳಿತದ ದುರಂತದ ಕುರಿತು, ಕಾಲ್ತುಳಿತದ ದುರಂತದಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ ನ್ಯಾ. ಕುನ್ಹಾ ನೇತೃತ್ವದ ತನಿಖೆಯ ಬಗ್ಗೆ ವರಿಷ್ಠ ರಿಗೆ ಮಾಹಿತಿ ನೀಡಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಇಂಟಲಿಜೆನ್ಸ್ ಮುಖ್ಯಸ್ಥರ ವರ್ಗಾವಣೆ ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದೇವೆ.

11 ಜನರು ಸಾಯಬಾರದಿತ್ತು ಈ ಘಟನೆಯಿಂದ ನೋವಾಗಿದೆ ಸಮರ್ಥನೆಗೆ ಕುಂಭಮೇಳದ ಘಟನೆಯನ್ನು ತೆಗೆದುಕೊಳ್ಳುವುದಿಲ್ಲ ರಾಜ್ಯದಲ್ಲಿ ನಡೆದ ಘಟನೆ ಯಿಂದ ನೋವಾಗಿದೆ ತನಿಖೆಯ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ