LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಈಗಲೂ ದುರ್ಬಲ ವರ್ಗದರು ಜಾತಿ ತಾರತಮ್ಯ ಅನುಭವಿಸುತ್ತಿದ್ದಾರೆ : ಸಿದ್ದರಾಮಯ್ಯ

Advertisement
ಬೆಂಗಳೂರು : ರಾಜ್ಯದಲ್ಲಿ ಪೊಲೀಸರು ಜಾತಿ ತಾರತಮ್ಯ ಪ್ರಕರಣಗಳನ್ನ ಗಂಭೀರವಾಗಿ ಪರಿಗಣಿಸಿ ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ.

ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.

ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ.

ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು.

ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ