LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಅಲ್ಪಸಂಖ್ಯಾತರಿಗೆ ಬೇರೆ ಅವಕಾಶ ನೀಡುತ್ತೇವೆ : ಸಿದ್ದರಾಮಯ್ಯ 

Advertisement
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಮರ್ಥ್ ಶಾಮನೂರು ಅವರಿಗೆ ನೀಡಿದ್ದಕ್ಕೆ ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದು, ಕೈ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಸಂಬಂಧ ಅಲ್ಪಸಂಖ್ಯಾತರನ್ನು ಮನವೊಲಿಸುತ್ತೇವೆ, ಅವರಿಗೆ ಬೇರೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ದಾವಣಗೆರೆ ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತರಲ್ಲಿನ ಅಸಮಾಧಾನ ಹೋಗಲಾಡಿಸಲು ಪ್ರಯತ್ನ ಮಾಡುತ್ತೇವೆ. ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ 100% ಗೆಲ್ಲುವ ವಿಶ್ವಾಸ ಇದೆ ಎಂದರು.

ಈ ಹಿಂದೆ ಬಿಜೆಪಿಯವರು ಇದೇ ರೀತಿ ಹೇಳಿದ್ದರು. ಬಸವರಾಜ್ ಬೊಮ್ಮಾಯಿ, ಕುಮಾರಸ್ವಾಮಿ ಪುತ್ರ ಗೆಲ್ತಾರೆ ಅಂತ ಹೇಳಿದ್ದರು, ಸೋತರು. ನಾವು ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿ ಕೊಟ್ಟಿದ್ದೇವೆ. ಬೈ ಎಲೆಕ್ಷನ್ ಗೆದ್ದು ಸಾಬೀತು ಮಾಡಿದ್ದೇವೆ ಎಂದು ಹೇಳಿದರು.

ಬಡವರು, ಅಲ್ಪಸಂಖ್ಯಾತರು, ರಾಜ್ಯದ ಜನ ನಮ್ಮ ಪರವಾಗಿ ಇದ್ದಾರೆ. ಈ ಉಪಚುನಾವಣೆಲ್ಲಿ ಬಿಜೆಪಿ ಗೆಲ್ಲೋದಿಲ್ಲ, ದಿಕ್ಸೂಚಿ ಹೇಗೆ ಆಗುತ್ತದೆ?.‌ ನಾವು ಅಧಿಕಾರದಲ್ಲಿ ಇದ್ದೇವೆ, ನಮಗೆ ಸಂಪೂರ್ಣ ಗೆಲ್ಲುವ ವಿಶ್ವಾಸವಿದೆ. ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕಡೇ ಸೋಲುತ್ತದೆ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ