LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪನೆ :ಸಿದ್ದರಾಮಯ್ಯ ಘೋಷಣೆ

Advertisement

ಬೆಂಗಳೂರು : ಜ್ಞಾನ ಎನ್ನುವುದು ಯಾರ ಅಪ್ಪನ ಮನೆಯ ಸ್ವತ್ತಲ್ಲ ಎಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.


ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯ ಆಗುತ್ತಿತ್ತಾ?ಬೆಸ್ತರ ಜಾತಿಯಲ್ಲಿ ಹುಟ್ಟಿದವರು ಮಹಾಭಾರತ ಬರೆಯಲು ಆಗುತ್ತಿತ್ತ? ಎಂದು ಪ್ರಶ್ನಿಸಿದರು.

ಎಲ್ಲರಿಗೂ ಸಮಾನವಾದ ಅವಕಾಶ ಸಿಕ್ಕರೆ ಸಮಾನವಾಗಿ ಬೆಳೆಯುತ್ತಾರೆ. ನಮ್ಮದು ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆ. ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ಬಂದರೆ ಇದಕ್ಕೆ ಚಲನೆ ಬರುತ್ತದೆ.

ಅದಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಬೇಡಿಕೆ ಇಟ್ಟಿದ್ದೀರಿ ಅದನ್ನು ಮುಂದಿನ ವರ್ಷದಿಂದ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ನಾನು ರಾಜಕೀಯದಲ್ಲಿ ಏನು ಮಾತು ಕೊಡುತ್ತೇನೋ ಆ ಕೆಲಸ ಮಾಡುತ್ತೇನೆ. ಮೆಟ್ರೋ ಯೋಜನೆ ನಾವು ಮತ್ತು ಕೇಂದ್ರ ಸರ್ಕಾರ ಸೇರಿ ಮಾಡಿರುವುದು. ಮೆಟ್ರೋದಲ್ಲಿ ರಾಜ್ಯದ ಪಾಲು ಹೆಚ್ಚಿದೆ ಶೇ.87 ರಷ್ಟು ನಮ್ಮ ಪಾಲಿದೆ. ಮೆಟ್ರೋ ಯೋಜನೆಗೆ ಬಸವಣ್ಣನ ಹೆಸರಿಡುವ ಕೇಂದ್ರ ಸರ್ಕಾರದ ಜೊತೆಗೆ ಮಾತನಾಡುತ್ತೇನೆ. ಬಸವಣ್ಣನ ಹೆಸರಿಡುವ ಬಗ್ಗೆ ನೀವು ನನಗೆ ಹೇಳಬೇಕಾಗಿಲ್ಲ ಮೆಟ್ರೋ ನಮ್ಮದೊಂದೇ ಯೋಜನೆಯಾಗಿದ್ದರೆ ಈಗಲೇ ಒಪ್ಪಿಗೆ ಕೊಡುತ್ತಿದ್ದೆ ಎಂದು ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ