LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರ್ ನನ್ನ ಹೆಂಡತಿಯ ಮದುವೆಯನ್ನು ತಪ್ಪಿಸಿ : ಬೆಳಗಾವಿಯಲ್ಲಿ ಪತಿಯ ಗೋಳಾಟ 

Advertisement

ಬೆಳಗಾವಿ: ಪರಸ್ಪರ ಒಪ್ಪಿಗೆಯಿಂದ ಮದುವೆಯಾದ (Marriage) ಪತ್ನಿಯನ್ನು ಆಕೆಯ ಮನೆಯವರೇ ಕೂಡಿಹಾಕಿ, ಇದೀಗ ಮತ್ತೊಬ್ಬರ ಜೊತೆ ಮದುವೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಬೆಳಗಾವಿ (Belagavi) ಜಿಲ್ಲೆಯ ಹಿರೆಬಾಗೇವಾಡಿಯಲ್ಲಿ ವೆಂಕಟೇಶ್ವರ ರಾಠೋಡ್ (Venkateshwara Rathod) ಎಂಬುವವರು ಗಂಭೀರ ಆರೋಪ ಮಾಡಿದ್ದಾರೆ.

ಇದು 2016 ಲವ್‌ ಸ್ಟೋರಿ

ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟೇಶ್ವರ ರಾಠೋಡ್, "ನನಗೆ ಮಂಜುಳಾ ಹಂಚಿನಮನಿ ಎಂಬಾಕೆಯ ಪರಿಚಯ 2016ರಿಂದಲೇ ಇತ್ತು. ಆಕೆಯನ್ನು ನಾನು 2022ರಲ್ಲಿ ಮದುವೆಯಾಗಿದ್ದೇನೆ.

ಆದರೆ ಈಗ ಆಕೆಯ ತಂದೆ ಹಿರೆಬಾಗೇವಾಡಿಯ ರುದ್ರಪ್ಪ ಹಂಚಿನಮನಿ ಹಾಗೂ ಸಹೋದರ ಪ್ರದೀಪ್ ಹಂಚಿನಮನಿ ಅವರು ಮಂಜುಳಾರನ್ನು ಮನೆಯಲ್ಲೇ ಕೂಡಿಹಾಕಿದ್ದಾರೆ" ಎಂದು ದೂರಿದ್ದಾರೆ. ಅಲ್ಲದೆ, ಪತ್ನಿಯ ಮನೆಯವರಿಗೆ ಮನೆ ಕಟ್ಟಲು ಲಕ್ಷಾಂತರ ರೂಪಾಯಿ ಹಣವನ್ನೂ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಜೈಲಿಗೂ ಕಳುಹಿಸಿದ್ದರು ಎಂದು ಪತಿಯ ಆಕ್ರೋಶ

ಪತ್ನಿಯ ಮನೆಯವರು ನನ್ನ ವಿರುದ್ಧ ಇಲ್ಲಸಲ್ಲದ ದೂರುಗಳನ್ನು ನೀಡಿ, ಸುಳ್ಳು ಕೇಸ್ ದಾಖಲಿಸಿ ನನ್ನನ್ನು ಜೈಲಿಗೂ ಕಳುಹಿಸುವಂತೆ ಷಡ್ಯಂತ್ರ ರೂಪಿಸಿದ್ದರು ಎಂದು ರಾಠೋಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 "ನನ್ನ ಮೇಲೆ ಹಲ್ಲೆ ನಡೆಸಿ ಬಂಗಾರ ಮತ್ತು ಹಣವನ್ನು ಸುಲಿಗೆ ಮಾಡಲಾಗಿದೆ. ನನ್ನ ಪತ್ನಿಯನ್ನು ಅವಳ ಇಚ್ಛೆಗೆ ವಿರುದ್ಧವಾಗಿ ಮತ್ತೊಬ್ಬರಿಗೆ ಮದುವೆ ಮಾಡಲು ಪ್ರಯತ್ನಿಸುತ್ತಿದ್ದಾರೆ, ಇದನ್ನು ಕೂಡಲೇ ನಿಲ್ಲಿಸಬೇಕು" ಎಂದು ಅವರು ಒತ್ತಾಯಿಸಿದ್ದಾರೆ.

ಪೊಲೀಸ್ ಠಾಣೆ ಮೆಟ್ಟಿಲೇರಿದ ವಿವಾದ

ಈ ಹಲ್ಲೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೆಂಕಟೇಶ್ವರ ರಾಠೋಡ್ ಈಗಾಗಲೇ ಹಿರೆಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮದುವೆಯಾದ ದಾಖಲೆಗಳಿದ್ದರೂ ಪತ್ನಿಯ ಮನೆಯವರು ಅಕ್ರಮವಾಗಿ ಆಕೆಯನ್ನು ಬಂಧಿಸಿಟ್ಟಿರುವುದು ಈಗ ಕಾನೂನು ಸಮರಕ್ಕೆ ಕಾರಣವಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಪತ್ನಿಯನ್ನು ತಮಗೆ ಒಪ್ಪಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ