LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಶೀಘ್ರವೇ ಮಹದಾಯಿ ಕಾಮಗಾರಿ ಆರಂಭಿಸುತ್ತೇವೆ, ಅದನ್ನು ತಡೆಯಲಿ, ನಾನೂ ನೋಡುತ್ತೇನೆ

Advertisement
ಬೆಂಗಳೂರು: "ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ.

ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ.

ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ನೀಡಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು.

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದೆ.

ಯೋಜನೆ ಜಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು, ಸ್ಥಳೀಯ ಸಂಸದರು ಹಾಗೂ ಕೇಂದ್ರದ ಹಾಲಿ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಈ ಯೋಜನೆ ಜಾರಿಯಾಗಲಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು" ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ