LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಮೆರವಣಿಗೆ ವೇಳೆ ಕಲ್ಲು ತೂರಾಟ 

Advertisement
ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ.

ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಹಿಂದೂ ಕಾರ್ಯಕರ್ತನ ತಲೆಗೆ ಗಾಯವಾಗಿದೆ. ತಲೆಗೆ ಕಲ್ಲು ಬಿದ್ದು ಪ್ರಕಾಶ್ ಅರಕೇರಿ ಎಂಬುವರ ತಲೆಗೆ ಗಾಯವಾಗಿದ್ದು, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳ್ಳುಗಾಡಿಗಳಿಗೆ ಬೆಂಕಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಬಳಿಕ ತರಕಾರಿ ಮಾರುಕಟ್ಟೆಯ ಬಳಿ ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ. ದುಷ್ಕರ್ಮಿಗಳಿ ಗಾಡಿಗಳಿಗೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.

ಭದ್ರತೆ ಹೆಚ್ಚಳ, ಪರಿಸ್ಥಿತಿ ನಿಯಂತ್ರಣ: ಎಸ್ಪಿ ಪ್ರತಿಕ್ರಿಯೆ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ.

ಮಸೀದಿ ಕಡೆ ಬಂದಾಗ ಎರಡು ಕಲ್ಲುಗಳು ಬಿದ್ದಿದೆ. ಕಲ್ಲು ಸಾರ್ವಜನಿಕರಿಗೆ ಬಿದ್ದಿಲ್ಲ, ಪೊಲೀಸರಿಗೆ ಬಿದ್ದಿದೆ. ಸದ್ಯ ಪರಿಸ್ಥಿತಿ ತಿಳಿಯಾಗಿದೆ ಎಂದು ತಿಳಿಸಿದ್ದಾರೆ.

ನಾವು ವಿಡಿಯೋಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಬಾಗಲಕೋಟೆಯಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ